The Rural Mirror ಕಾಳಜಿ

ಜೂ.30 ರವರೆಗೆ ಮಾದಕ ವ್ಯಸನದ ವಿರುದ್ಧ ಜನಜಾಗೃತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನ
ಏ. 21 ರಿಂದ  ಜೂ. 30 ರವರೆಗೆ ನಡೆಯಲಿದೆ.

Advertisement

ಮಾದಕ ವ್ಯಸನವು ಇಂದು ಬಹುದೊಡ್ಡ ಜಾಲವಾಗಿ ಹರಡುತ್ತಿದೆ.  ರಾಜ್ಯದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದ.ಕ ಜಿಲ್ಲೆಯು ಎರಡನೇ ಸ್ಥಾನದಲ್ಲಿದೆ. ಮಾದಕ ವ್ಯಸನದ ಚಟ      ಸುಳ್ಯ ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಜನರಲ್ಲಿ ಆತಂಕದ ವಾತವರಣ ಸೃಷ್ಟಿಸಿದೆ. ಭವ್ಯ ಭಾರತದ  ಭವಿಷ್ಯವನ್ನು ರೂಪಿಸಬೇಕಾದಂತಹ ಯವ ಸಮುದಾಯ ಮಾದಕ ವ್ಯಸನಕ್ಕೆ ತುತ್ತಾಗಿರುವುದು ಅಘಾತಕಾರಿ ಮತ್ತು ದಯನಿಯ ವಿಷಯ. ಇವುಗಳನ್ನು ಮನಗಂಡು ಇಬ್ಬನಿ ಸುಳ್ಯ ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ದ ಬೃಹತ್ ಜನಜಾಗೃತಿ ಅಭಿಯಾನ ನಡೆಸಲು ತೀರ್ಮಾನಿಸಿದೆ. ಈ  ಅಭಿಯಾನದ ಅಂಗವಾಗಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ.

ಪ್ಲೇ ಕಾರ್ಡ್ ಪ್ರದರ್ಶನ: ಸುಳ್ಯ ತಾಲೂಕಿನ ವಿವಿಧ ಸಾಧಕರು, ಅಧಿಕಾರಿಗಳು, ರಾಜಕಾರಣಿಗಳು, ಧಾರ್ಮಿಕ ಪಂಡಿತರು, ಮತ್ತು ಯುವಕರೊಂದಿಗೆ ಮಾದಕ ವ್ಯಸನದ ವಿರುದ್ದ ಪ್ಲೇ ಕಾರ್ಡ್ ಪ್ರದರ್ಶನ.

ಕರ ಪತ್ರ ವಿತರಣೆ: ಸುಳ್ಯ ತಾಲೂಕಿನ  ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ  ಮಾದಕ ವ್ಯಸನದ ವಿರುದ್ದ ಜಾಗೃತಿ ಮೂಡಿಸುವ ಕರಪತ್ರ ವಿತರಣೆ.

ವಿಚಾರ ಸಂಕಿರಣ:ಆರೋಗ್ಯ ಇಲಾಖೆ, ಸಾರ್ವಜನಿಕರು, ಸುಳ್ಯ ತಾಲೂಕಿನ ಸ್ನಾತಕೋತ್ತರ ವಿಧ್ಯಾರ್ಥಿಗಳು, ಸ್ನಾತಕೋತ್ತರ ಸಮಾಜ ಕಾರ್ಯ ವಿಧ್ಯಾರ್ಥಿಗಳು ಮತ್ತು ಸಮಾಜ ಕಾರ್ಯ ಪದವಿ ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಮಾದಕ ವ್ಯಸನದ ವಿರುದ್ಧ ವಿಚಾರ ಸಂಕಿರಣ.

Advertisement

ಪ್ರತಿಜ್ಞೆ ಸ್ವೀಕಾರ: ಸುಳ್ಯ ತಾಲೂಕು ವ್ಯಾಪ್ತಿಯ ಪ್ರತೀ ಕಾಲೇಜು ಮತ್ತು ಶಾಲೆಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ ಕಾರ್ಯಗಾರ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ.

ಬೀದಿ ನಾಟಕ:ಸುಳ್ಯ ತಾಲೂಕಿನ ವಿವಿಧ ಪಟ್ಟಣ ಪ್ರದೇಶದಲ್ಲಿ ಪ್ರತಿಷ್ಠಿತ ಬೀದಿ ನಾಟಕ ತಂಡದಿಂದ ಮಾದಕ ವ್ಯಸನದ ವಿರುದ್ದ ಬೃಹತ್ ಬೀದಿ ನಾಟಕ.

ಜನಜಾಗೃತಿ ಕಾಲ್ನಡಿಗೆ ಜಾಥ:ಮಾದಕ ವ್ಯಸನದ ವಿರುದ್ಧ ವಿವಿಧ ಸಂಘ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಹಯೋಗದಿಂದಿಗೆ ಬೃಹತ್ ಜಾಗೃತಿ ಕಾಲ್ನಡಿಗೆ ಜಾಥ.

ಇ-ಪೋಸ್ಟರ್:ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್ ವಾಟ್ಸಪ್ ಇನ್ಸ್ಟಾಗ್ರಾಮ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ.

ಜನಜಾಗೃತಿ ಕ್ರಾಂತಿ ಯಾತ್ರೆ:ಸುಳ್ಯ ನಗರದ 18 ವಾರ್ಡ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಕ್ರಾಂತಿ ಯಾತ್ರೆ ಮತ್ತು ಪ್ರತೀ ವಾರ್ಡ್ ಗಳಲ್ಲಿ ಸಭಾ ಕಾರ್ಯಕ್ರಮ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

8 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

8 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

8 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

8 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

8 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

8 hours ago