Advertisement
The Rural Mirror ಕಾಳಜಿ

ಜೂ.30 ರವರೆಗೆ ಮಾದಕ ವ್ಯಸನದ ವಿರುದ್ಧ ಜನಜಾಗೃತಿ

Share

ಸುಳ್ಯ: ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನ
ಏ. 21 ರಿಂದ  ಜೂ. 30 ರವರೆಗೆ ನಡೆಯಲಿದೆ.

ಮಾದಕ ವ್ಯಸನವು ಇಂದು ಬಹುದೊಡ್ಡ ಜಾಲವಾಗಿ ಹರಡುತ್ತಿದೆ.  ರಾಜ್ಯದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದ.ಕ ಜಿಲ್ಲೆಯು ಎರಡನೇ ಸ್ಥಾನದಲ್ಲಿದೆ. ಮಾದಕ ವ್ಯಸನದ ಚಟ      ಸುಳ್ಯ ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಜನರಲ್ಲಿ ಆತಂಕದ ವಾತವರಣ ಸೃಷ್ಟಿಸಿದೆ. ಭವ್ಯ ಭಾರತದ  ಭವಿಷ್ಯವನ್ನು ರೂಪಿಸಬೇಕಾದಂತಹ ಯವ ಸಮುದಾಯ ಮಾದಕ ವ್ಯಸನಕ್ಕೆ ತುತ್ತಾಗಿರುವುದು ಅಘಾತಕಾರಿ ಮತ್ತು ದಯನಿಯ ವಿಷಯ. ಇವುಗಳನ್ನು ಮನಗಂಡು ಇಬ್ಬನಿ ಸುಳ್ಯ ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ದ ಬೃಹತ್ ಜನಜಾಗೃತಿ ಅಭಿಯಾನ ನಡೆಸಲು ತೀರ್ಮಾನಿಸಿದೆ. ಈ  ಅಭಿಯಾನದ ಅಂಗವಾಗಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ.

ಪ್ಲೇ ಕಾರ್ಡ್ ಪ್ರದರ್ಶನ: ಸುಳ್ಯ ತಾಲೂಕಿನ ವಿವಿಧ ಸಾಧಕರು, ಅಧಿಕಾರಿಗಳು, ರಾಜಕಾರಣಿಗಳು, ಧಾರ್ಮಿಕ ಪಂಡಿತರು, ಮತ್ತು ಯುವಕರೊಂದಿಗೆ ಮಾದಕ ವ್ಯಸನದ ವಿರುದ್ದ ಪ್ಲೇ ಕಾರ್ಡ್ ಪ್ರದರ್ಶನ.

ಕರ ಪತ್ರ ವಿತರಣೆ: ಸುಳ್ಯ ತಾಲೂಕಿನ  ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ  ಮಾದಕ ವ್ಯಸನದ ವಿರುದ್ದ ಜಾಗೃತಿ ಮೂಡಿಸುವ ಕರಪತ್ರ ವಿತರಣೆ.

ವಿಚಾರ ಸಂಕಿರಣ:ಆರೋಗ್ಯ ಇಲಾಖೆ, ಸಾರ್ವಜನಿಕರು, ಸುಳ್ಯ ತಾಲೂಕಿನ ಸ್ನಾತಕೋತ್ತರ ವಿಧ್ಯಾರ್ಥಿಗಳು, ಸ್ನಾತಕೋತ್ತರ ಸಮಾಜ ಕಾರ್ಯ ವಿಧ್ಯಾರ್ಥಿಗಳು ಮತ್ತು ಸಮಾಜ ಕಾರ್ಯ ಪದವಿ ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಮಾದಕ ವ್ಯಸನದ ವಿರುದ್ಧ ವಿಚಾರ ಸಂಕಿರಣ.

ಪ್ರತಿಜ್ಞೆ ಸ್ವೀಕಾರ: ಸುಳ್ಯ ತಾಲೂಕು ವ್ಯಾಪ್ತಿಯ ಪ್ರತೀ ಕಾಲೇಜು ಮತ್ತು ಶಾಲೆಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ ಕಾರ್ಯಗಾರ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ.

ಬೀದಿ ನಾಟಕ:ಸುಳ್ಯ ತಾಲೂಕಿನ ವಿವಿಧ ಪಟ್ಟಣ ಪ್ರದೇಶದಲ್ಲಿ ಪ್ರತಿಷ್ಠಿತ ಬೀದಿ ನಾಟಕ ತಂಡದಿಂದ ಮಾದಕ ವ್ಯಸನದ ವಿರುದ್ದ ಬೃಹತ್ ಬೀದಿ ನಾಟಕ.

ಜನಜಾಗೃತಿ ಕಾಲ್ನಡಿಗೆ ಜಾಥ:ಮಾದಕ ವ್ಯಸನದ ವಿರುದ್ಧ ವಿವಿಧ ಸಂಘ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಹಯೋಗದಿಂದಿಗೆ ಬೃಹತ್ ಜಾಗೃತಿ ಕಾಲ್ನಡಿಗೆ ಜಾಥ.

ಇ-ಪೋಸ್ಟರ್:ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್ ವಾಟ್ಸಪ್ ಇನ್ಸ್ಟಾಗ್ರಾಮ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ.

ಜನಜಾಗೃತಿ ಕ್ರಾಂತಿ ಯಾತ್ರೆ:ಸುಳ್ಯ ನಗರದ 18 ವಾರ್ಡ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಕ್ರಾಂತಿ ಯಾತ್ರೆ ಮತ್ತು ಪ್ರತೀ ವಾರ್ಡ್ ಗಳಲ್ಲಿ ಸಭಾ ಕಾರ್ಯಕ್ರಮ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago