( ಫೋಟೊ ಕೃಪೆ : ಅಂತರ್ಜಾಲ)
ಸುಳ್ಯ: ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನ
ಏ. 21 ರಿಂದ ಜೂ. 30 ರವರೆಗೆ ನಡೆಯಲಿದೆ.
ಮಾದಕ ವ್ಯಸನವು ಇಂದು ಬಹುದೊಡ್ಡ ಜಾಲವಾಗಿ ಹರಡುತ್ತಿದೆ. ರಾಜ್ಯದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದ.ಕ ಜಿಲ್ಲೆಯು ಎರಡನೇ ಸ್ಥಾನದಲ್ಲಿದೆ. ಮಾದಕ ವ್ಯಸನದ ಚಟ ಸುಳ್ಯ ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಜನರಲ್ಲಿ ಆತಂಕದ ವಾತವರಣ ಸೃಷ್ಟಿಸಿದೆ. ಭವ್ಯ ಭಾರತದ ಭವಿಷ್ಯವನ್ನು ರೂಪಿಸಬೇಕಾದಂತಹ ಯವ ಸಮುದಾಯ ಮಾದಕ ವ್ಯಸನಕ್ಕೆ ತುತ್ತಾಗಿರುವುದು ಅಘಾತಕಾರಿ ಮತ್ತು ದಯನಿಯ ವಿಷಯ. ಇವುಗಳನ್ನು ಮನಗಂಡು ಇಬ್ಬನಿ ಸುಳ್ಯ ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ದ ಬೃಹತ್ ಜನಜಾಗೃತಿ ಅಭಿಯಾನ ನಡೆಸಲು ತೀರ್ಮಾನಿಸಿದೆ. ಈ ಅಭಿಯಾನದ ಅಂಗವಾಗಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ.
ಪ್ಲೇ ಕಾರ್ಡ್ ಪ್ರದರ್ಶನ: ಸುಳ್ಯ ತಾಲೂಕಿನ ವಿವಿಧ ಸಾಧಕರು, ಅಧಿಕಾರಿಗಳು, ರಾಜಕಾರಣಿಗಳು, ಧಾರ್ಮಿಕ ಪಂಡಿತರು, ಮತ್ತು ಯುವಕರೊಂದಿಗೆ ಮಾದಕ ವ್ಯಸನದ ವಿರುದ್ದ ಪ್ಲೇ ಕಾರ್ಡ್ ಪ್ರದರ್ಶನ.
ಕರ ಪತ್ರ ವಿತರಣೆ: ಸುಳ್ಯ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ವ್ಯಸನದ ವಿರುದ್ದ ಜಾಗೃತಿ ಮೂಡಿಸುವ ಕರಪತ್ರ ವಿತರಣೆ.
ವಿಚಾರ ಸಂಕಿರಣ:ಆರೋಗ್ಯ ಇಲಾಖೆ, ಸಾರ್ವಜನಿಕರು, ಸುಳ್ಯ ತಾಲೂಕಿನ ಸ್ನಾತಕೋತ್ತರ ವಿಧ್ಯಾರ್ಥಿಗಳು, ಸ್ನಾತಕೋತ್ತರ ಸಮಾಜ ಕಾರ್ಯ ವಿಧ್ಯಾರ್ಥಿಗಳು ಮತ್ತು ಸಮಾಜ ಕಾರ್ಯ ಪದವಿ ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಮಾದಕ ವ್ಯಸನದ ವಿರುದ್ಧ ವಿಚಾರ ಸಂಕಿರಣ.
ಪ್ರತಿಜ್ಞೆ ಸ್ವೀಕಾರ: ಸುಳ್ಯ ತಾಲೂಕು ವ್ಯಾಪ್ತಿಯ ಪ್ರತೀ ಕಾಲೇಜು ಮತ್ತು ಶಾಲೆಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ ಕಾರ್ಯಗಾರ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ.
ಬೀದಿ ನಾಟಕ:ಸುಳ್ಯ ತಾಲೂಕಿನ ವಿವಿಧ ಪಟ್ಟಣ ಪ್ರದೇಶದಲ್ಲಿ ಪ್ರತಿಷ್ಠಿತ ಬೀದಿ ನಾಟಕ ತಂಡದಿಂದ ಮಾದಕ ವ್ಯಸನದ ವಿರುದ್ದ ಬೃಹತ್ ಬೀದಿ ನಾಟಕ.
ಜನಜಾಗೃತಿ ಕಾಲ್ನಡಿಗೆ ಜಾಥ:ಮಾದಕ ವ್ಯಸನದ ವಿರುದ್ಧ ವಿವಿಧ ಸಂಘ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಹಯೋಗದಿಂದಿಗೆ ಬೃಹತ್ ಜಾಗೃತಿ ಕಾಲ್ನಡಿಗೆ ಜಾಥ.
ಇ-ಪೋಸ್ಟರ್:ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್ ವಾಟ್ಸಪ್ ಇನ್ಸ್ಟಾಗ್ರಾಮ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ.
ಜನಜಾಗೃತಿ ಕ್ರಾಂತಿ ಯಾತ್ರೆ:ಸುಳ್ಯ ನಗರದ 18 ವಾರ್ಡ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಕ್ರಾಂತಿ ಯಾತ್ರೆ ಮತ್ತು ಪ್ರತೀ ವಾರ್ಡ್ ಗಳಲ್ಲಿ ಸಭಾ ಕಾರ್ಯಕ್ರಮ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…