Advertisement
The Rural Mirror ಕಾಳಜಿ

ಜೂ.30 ರವರೆಗೆ ಮಾದಕ ವ್ಯಸನದ ವಿರುದ್ಧ ಜನಜಾಗೃತಿ

Share

ಸುಳ್ಯ: ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನ
ಏ. 21 ರಿಂದ  ಜೂ. 30 ರವರೆಗೆ ನಡೆಯಲಿದೆ.

Advertisement
Advertisement

ಮಾದಕ ವ್ಯಸನವು ಇಂದು ಬಹುದೊಡ್ಡ ಜಾಲವಾಗಿ ಹರಡುತ್ತಿದೆ.  ರಾಜ್ಯದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದ.ಕ ಜಿಲ್ಲೆಯು ಎರಡನೇ ಸ್ಥಾನದಲ್ಲಿದೆ. ಮಾದಕ ವ್ಯಸನದ ಚಟ      ಸುಳ್ಯ ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಜನರಲ್ಲಿ ಆತಂಕದ ವಾತವರಣ ಸೃಷ್ಟಿಸಿದೆ. ಭವ್ಯ ಭಾರತದ  ಭವಿಷ್ಯವನ್ನು ರೂಪಿಸಬೇಕಾದಂತಹ ಯವ ಸಮುದಾಯ ಮಾದಕ ವ್ಯಸನಕ್ಕೆ ತುತ್ತಾಗಿರುವುದು ಅಘಾತಕಾರಿ ಮತ್ತು ದಯನಿಯ ವಿಷಯ. ಇವುಗಳನ್ನು ಮನಗಂಡು ಇಬ್ಬನಿ ಸುಳ್ಯ ತಾಲೂಕಿನಾದ್ಯಂತ ಮಾದಕ ವ್ಯಸನದ ವಿರುದ್ದ ಬೃಹತ್ ಜನಜಾಗೃತಿ ಅಭಿಯಾನ ನಡೆಸಲು ತೀರ್ಮಾನಿಸಿದೆ. ಈ  ಅಭಿಯಾನದ ಅಂಗವಾಗಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ.

Advertisement

ಪ್ಲೇ ಕಾರ್ಡ್ ಪ್ರದರ್ಶನ: ಸುಳ್ಯ ತಾಲೂಕಿನ ವಿವಿಧ ಸಾಧಕರು, ಅಧಿಕಾರಿಗಳು, ರಾಜಕಾರಣಿಗಳು, ಧಾರ್ಮಿಕ ಪಂಡಿತರು, ಮತ್ತು ಯುವಕರೊಂದಿಗೆ ಮಾದಕ ವ್ಯಸನದ ವಿರುದ್ದ ಪ್ಲೇ ಕಾರ್ಡ್ ಪ್ರದರ್ಶನ.

ಕರ ಪತ್ರ ವಿತರಣೆ: ಸುಳ್ಯ ತಾಲೂಕಿನ  ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ  ಮಾದಕ ವ್ಯಸನದ ವಿರುದ್ದ ಜಾಗೃತಿ ಮೂಡಿಸುವ ಕರಪತ್ರ ವಿತರಣೆ.

Advertisement

ವಿಚಾರ ಸಂಕಿರಣ:ಆರೋಗ್ಯ ಇಲಾಖೆ, ಸಾರ್ವಜನಿಕರು, ಸುಳ್ಯ ತಾಲೂಕಿನ ಸ್ನಾತಕೋತ್ತರ ವಿಧ್ಯಾರ್ಥಿಗಳು, ಸ್ನಾತಕೋತ್ತರ ಸಮಾಜ ಕಾರ್ಯ ವಿಧ್ಯಾರ್ಥಿಗಳು ಮತ್ತು ಸಮಾಜ ಕಾರ್ಯ ಪದವಿ ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಮಾದಕ ವ್ಯಸನದ ವಿರುದ್ಧ ವಿಚಾರ ಸಂಕಿರಣ.

ಪ್ರತಿಜ್ಞೆ ಸ್ವೀಕಾರ: ಸುಳ್ಯ ತಾಲೂಕು ವ್ಯಾಪ್ತಿಯ ಪ್ರತೀ ಕಾಲೇಜು ಮತ್ತು ಶಾಲೆಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ ಕಾರ್ಯಗಾರ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ.

Advertisement

ಬೀದಿ ನಾಟಕ:ಸುಳ್ಯ ತಾಲೂಕಿನ ವಿವಿಧ ಪಟ್ಟಣ ಪ್ರದೇಶದಲ್ಲಿ ಪ್ರತಿಷ್ಠಿತ ಬೀದಿ ನಾಟಕ ತಂಡದಿಂದ ಮಾದಕ ವ್ಯಸನದ ವಿರುದ್ದ ಬೃಹತ್ ಬೀದಿ ನಾಟಕ.

ಜನಜಾಗೃತಿ ಕಾಲ್ನಡಿಗೆ ಜಾಥ:ಮಾದಕ ವ್ಯಸನದ ವಿರುದ್ಧ ವಿವಿಧ ಸಂಘ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಹಯೋಗದಿಂದಿಗೆ ಬೃಹತ್ ಜಾಗೃತಿ ಕಾಲ್ನಡಿಗೆ ಜಾಥ.

Advertisement

ಇ-ಪೋಸ್ಟರ್:ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್ ವಾಟ್ಸಪ್ ಇನ್ಸ್ಟಾಗ್ರಾಮ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ.

ಜನಜಾಗೃತಿ ಕ್ರಾಂತಿ ಯಾತ್ರೆ:ಸುಳ್ಯ ನಗರದ 18 ವಾರ್ಡ್ ಗಳಲ್ಲಿ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಕ್ರಾಂತಿ ಯಾತ್ರೆ ಮತ್ತು ಪ್ರತೀ ವಾರ್ಡ್ ಗಳಲ್ಲಿ ಸಭಾ ಕಾರ್ಯಕ್ರಮ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

10 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

11 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago