Advertisement
ಸುದ್ದಿಗಳು

ಜೂ.7 : ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಗೊಂದಲ ನಿವಾರಣೆಗೆ ಪೇಜಾವರ ಶ್ರೀ ಆಗಮನ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸರ್ಪಸಂಸ್ಕಾರ ಸೇವೆಯ ಸಲುವಾಗಿ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಗೊಂದಲ ನಡೆಯುತ್ತಿದ್ದು ಇದನ್ನು ಸರಿಪಡಿಸಲು ಪೇಜಾವರ ಶ್ರೀಗಳು ಜೂ.7 ರಂದು ಸಂಜೆ ಆಗಮಿಸಲಿದ್ದಾರೆ. ಪೇಜಾವರ ಶ್ರೀಗಳು  ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಲಿದ್ದಾರೆ.

ಇದೇ ಸಂದರ್ಭ  ಬೆಳಗ್ಗೆ ಸುಬ್ರಹ್ಮಣ್ಯದ ಉತ್ತರಾಧಿಮಠದಲ್ಲಿ ಪೇಜಾವರ ಶ್ರೀ ಗಳು ಆಗಮಿಸುವ ಬಗ್ಗೆ ಪೂವ೯ಭಾವಿ ಸಭೆ ನಡೆಯಲಿದೆ.ಕ್ಷೇತ್ರದ ಶಾಂತಿ , ಸುವ್ಯವಸ್ಥೆ ಪಾವಿತ್ರ್ಯತೆಯನ್ನು ಕಾಪಾಡಲು ಭಕ್ತರು ಆಗಮಿಸಿ  ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಗೊಂದಲಗಳ ಪರಿಹಾರದ ಬಗ್ಗೆ ಸೂಕ್ತ ಸಲಹೆ ನೀಡುವಂತೆ ದೇವಸ್ಥಾನದ ಹಿತರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಮಹೇಶ್  ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.

ಇದೇ ಸಂಬಂಧವಾಗಿ ಜೂ.6 ರ ಗುರುವಾರ ದೇವಸ್ಥಾನದ ಹಿತರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಮಹೇಶ್  ಕುಮಾರ್ ಕರಿಕ್ಕಳ ಹಾಗೂ ಭಕ್ತ ಗುರುಪ್ರಸಾದ್ ಪಂಜ ಉಡುಪಿಗೆ ಭೇಟಿ ನೀಡಿ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಜೊತೆ ಮಾತುಕತೆ ನಡೆಸಿದರು. ದೇವಸ್ಥಾನದ ಇತಿಹಾಸ ಹಾಗೂ ನಡೆಯುವ ಸೇವೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಇದೇ ಸಂದರ್ಭ ವಿಶ್ವ ಹಿಂದೂ ಪರಿಷದ್ ಮುಖಂಡ ಪ್ರೊ.ಎಂ.ಬಿ.ಪುರಾಣಿಕ್ ಅವರು ಮಠದ ಪರವಾಗಿ ವಿವರ ನೀಡಿದರು. ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದ ಗಣಪತಿ ಗುಡಿಯ ಬಗ್ಗೆಯೂ, ಮರುನಿರ್ಮಾಣವಾಗುವ ಬಗ್ಗೆಯೂ ಪೇಜಾವರ ಶ್ರೀಗಳ ಗಮನಕ್ಕೆ ತರಲಾಯಿತು ಎಂದು ಮೂಲಗಳು ತಿಳಿಸಿವೆ.

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

2 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

4 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

9 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

15 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

15 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago