Advertisement
ಸುದ್ದಿಗಳು

ಜೂ.7 : ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಗೊಂದಲ ನಿವಾರಣೆಗೆ ಪೇಜಾವರ ಶ್ರೀ ಆಗಮನ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸರ್ಪಸಂಸ್ಕಾರ ಸೇವೆಯ ಸಲುವಾಗಿ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಗೊಂದಲ ನಡೆಯುತ್ತಿದ್ದು ಇದನ್ನು ಸರಿಪಡಿಸಲು ಪೇಜಾವರ ಶ್ರೀಗಳು ಜೂ.7 ರಂದು ಸಂಜೆ ಆಗಮಿಸಲಿದ್ದಾರೆ. ಪೇಜಾವರ ಶ್ರೀಗಳು  ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಲಿದ್ದಾರೆ.

ಇದೇ ಸಂದರ್ಭ  ಬೆಳಗ್ಗೆ ಸುಬ್ರಹ್ಮಣ್ಯದ ಉತ್ತರಾಧಿಮಠದಲ್ಲಿ ಪೇಜಾವರ ಶ್ರೀ ಗಳು ಆಗಮಿಸುವ ಬಗ್ಗೆ ಪೂವ೯ಭಾವಿ ಸಭೆ ನಡೆಯಲಿದೆ.ಕ್ಷೇತ್ರದ ಶಾಂತಿ , ಸುವ್ಯವಸ್ಥೆ ಪಾವಿತ್ರ್ಯತೆಯನ್ನು ಕಾಪಾಡಲು ಭಕ್ತರು ಆಗಮಿಸಿ  ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಗೊಂದಲಗಳ ಪರಿಹಾರದ ಬಗ್ಗೆ ಸೂಕ್ತ ಸಲಹೆ ನೀಡುವಂತೆ ದೇವಸ್ಥಾನದ ಹಿತರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಮಹೇಶ್  ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.

ಇದೇ ಸಂಬಂಧವಾಗಿ ಜೂ.6 ರ ಗುರುವಾರ ದೇವಸ್ಥಾನದ ಹಿತರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಮಹೇಶ್  ಕುಮಾರ್ ಕರಿಕ್ಕಳ ಹಾಗೂ ಭಕ್ತ ಗುರುಪ್ರಸಾದ್ ಪಂಜ ಉಡುಪಿಗೆ ಭೇಟಿ ನೀಡಿ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಜೊತೆ ಮಾತುಕತೆ ನಡೆಸಿದರು. ದೇವಸ್ಥಾನದ ಇತಿಹಾಸ ಹಾಗೂ ನಡೆಯುವ ಸೇವೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಇದೇ ಸಂದರ್ಭ ವಿಶ್ವ ಹಿಂದೂ ಪರಿಷದ್ ಮುಖಂಡ ಪ್ರೊ.ಎಂ.ಬಿ.ಪುರಾಣಿಕ್ ಅವರು ಮಠದ ಪರವಾಗಿ ವಿವರ ನೀಡಿದರು. ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದ ಗಣಪತಿ ಗುಡಿಯ ಬಗ್ಗೆಯೂ, ಮರುನಿರ್ಮಾಣವಾಗುವ ಬಗ್ಗೆಯೂ ಪೇಜಾವರ ಶ್ರೀಗಳ ಗಮನಕ್ಕೆ ತರಲಾಯಿತು ಎಂದು ಮೂಲಗಳು ತಿಳಿಸಿವೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

17 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 days ago