ಧಾರ್ಮಿಕ

ಜೂ.8 ರಿಂದ ಭಕ್ತರಿಗೆ ಬಾಗಿಲು ತೆರೆಯುವ ದೇಗುಲ | ದೇಗುಲಗಳಲ್ಲಿ ಇನ್ನು ಎಲ್ಲರಿಗೂ ಹೆಚ್ಚು”ಶುದ್ಧಾಚಾರ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೊನಾ ಲಾಕ್ಡೌನ್ ನಂತರ ಇದೀಗ ಜೂ.8 ರಿಂದ ದೇವಸ್ಥಾನಗಳ ಬಾಗಿಲು ಭಕ್ತರಿಗೆ ತೆರೆಯುತ್ತಿದೆ. ಇದುವರೆಗೆ ಅರ್ಚಕರು ಹಾಗೂ ಅಗತ್ಯ ಸಿಬಂದಿಗಳು ದೇವಸ್ಥಾನದಲ್ಲಿ  ಪೂಜೆ ಸಹಿತ ಇತರ ತುರ್ತು ಕಾರ್ಯ ಮಾಡುತ್ತಿದ್ದರು. ಜೂ.8 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ದೇವಸ್ಥಾನದ ವಠಾರದಲ್ಲಿ ಇನ್ನೂ ಹೆಚ್ಚು “ಶುದ್ಧಾಚಾರ”ದಿಂದ   ಎಲ್ಲಾ ಭಕ್ತಾದಿಗಳು ಇರಲೇಬೇಕಾಗಿದೆ. ಆಡಳಿತದಿಂದ ತೀರ್ಥಪ್ರಸಾದ ನೀಡುವುದು, ದೇವರಿಗೆ ಅಡ್ಡ ಬೀಳುವುದಕ್ಕೆ ಅವಕಾಶ ನಿರಾಕರಿಸಲಾಗಿದೆ. 

Advertisement
Advertisement

 

ಕೊರೊನಾ ಲಾಕ್ಡೌನ್ ನಂತರ ಜೂ.8 ರಿಂದ ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ದೇಗುಲಗಳು ಭಕ್ತರ ಪ್ರವೇಶಕ್ಕೆ ಬಾಗಿಲು ತೆರೆಯುತ್ತದೆ. ಆದರ ಸರಕಾರ ಕೆಲವೊಂದು ಕಡ್ಡಾಯ ನಿಯಮ ಪಾಲಿಸಲು ಸೂಚಿಸಿದೆ. ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮ ವಹಿಸಿದೆ.

ಕುಕ್ಕೆ ಸುಬ್ರಹ್ಮಣ್ಯದ ಭಕ್ತರ ಪ್ರವೇಶಕ್ಕೆ ವಿವಿಧ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಅದರಲ್ಲಿ  ಪ್ರಮುಖವಾಗಿ ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ಜೂ.30 ರವರೆಗೆ ದೇವಸ್ಥಾನ ವಸತಿ ಗೃಹಗಳಲ್ಲಿ  ಕೊಠಡಿ ವ್ಯವಸ್ಥೆ ಇರುವುದಿಲ್ಲ.  ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಇರುತ್ತದೆ.  ಶೀತ, ಜ್ವರ ಇದ್ದವರಿಗೆ ಕಡ್ಡಾಯವಾಗಿ ಪ್ರವೇಶ ಇರುವುದಿಲ್ಲ, 65 ವರ್ಷ ಮೇಲ್ಪಟ್ಟ, 10 ವರ್ಷದ ಕೆಳಗಿನವರಿಗೆ, ಗರ್ಭಿಣಿಯರು ದೇವರ ದರ್ಶನ ಸದ್ಯಕ್ಕೆ ಮುಂದೂಡಬೇಕಾಗುತ್ತದೆ.  ತೀರ್ಥ-ಗಂಧ, ಮಂಗಳಾರತಿ, ಪ್ರಸಾದ, ಅನ್ನಪ್ರಸಾದ ಇರುವುದಿಲ್ಲ. ಕೇವಲ ದೇವರ ದರ್ಶನ ಮಾಡಿ ಬರಬಹುದಾಗಿದೆ. ಒಳಗಡೆ ಕಡ್ಡಾಯವಾಗಿ ಸಾಮಾಜಿಕ ಅಂತರ, ಮುಖವಸ್ತ್ರ ಇರಲೇಬೇಕು.  ಅಡ್ಡಬೀಳುವುದು ಹಾಗೂ ಕೂರುವುದಕ್ಕೆ ಅವಕಾಶ ಇಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

4 minutes ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

3 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

3 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

3 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…

3 hours ago