Advertisement
ಧಾರ್ಮಿಕ

ಜೂ.8 ರಿಂದ ಭಕ್ತರಿಗೆ ಬಾಗಿಲು ತೆರೆಯುವ ದೇಗುಲ | ದೇಗುಲಗಳಲ್ಲಿ ಇನ್ನು ಎಲ್ಲರಿಗೂ ಹೆಚ್ಚು”ಶುದ್ಧಾಚಾರ”

Share

ಕೊರೊನಾ ಲಾಕ್ಡೌನ್ ನಂತರ ಇದೀಗ ಜೂ.8 ರಿಂದ ದೇವಸ್ಥಾನಗಳ ಬಾಗಿಲು ಭಕ್ತರಿಗೆ ತೆರೆಯುತ್ತಿದೆ. ಇದುವರೆಗೆ ಅರ್ಚಕರು ಹಾಗೂ ಅಗತ್ಯ ಸಿಬಂದಿಗಳು ದೇವಸ್ಥಾನದಲ್ಲಿ  ಪೂಜೆ ಸಹಿತ ಇತರ ತುರ್ತು ಕಾರ್ಯ ಮಾಡುತ್ತಿದ್ದರು. ಜೂ.8 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ದೇವಸ್ಥಾನದ ವಠಾರದಲ್ಲಿ ಇನ್ನೂ ಹೆಚ್ಚು “ಶುದ್ಧಾಚಾರ”ದಿಂದ   ಎಲ್ಲಾ ಭಕ್ತಾದಿಗಳು ಇರಲೇಬೇಕಾಗಿದೆ. ಆಡಳಿತದಿಂದ ತೀರ್ಥಪ್ರಸಾದ ನೀಡುವುದು, ದೇವರಿಗೆ ಅಡ್ಡ ಬೀಳುವುದಕ್ಕೆ ಅವಕಾಶ ನಿರಾಕರಿಸಲಾಗಿದೆ. 

Advertisement

 

ಕೊರೊನಾ ಲಾಕ್ಡೌನ್ ನಂತರ ಜೂ.8 ರಿಂದ ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ದೇಗುಲಗಳು ಭಕ್ತರ ಪ್ರವೇಶಕ್ಕೆ ಬಾಗಿಲು ತೆರೆಯುತ್ತದೆ. ಆದರ ಸರಕಾರ ಕೆಲವೊಂದು ಕಡ್ಡಾಯ ನಿಯಮ ಪಾಲಿಸಲು ಸೂಚಿಸಿದೆ. ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮ ವಹಿಸಿದೆ.

ಕುಕ್ಕೆ ಸುಬ್ರಹ್ಮಣ್ಯದ ಭಕ್ತರ ಪ್ರವೇಶಕ್ಕೆ ವಿವಿಧ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಅದರಲ್ಲಿ  ಪ್ರಮುಖವಾಗಿ ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ಜೂ.30 ರವರೆಗೆ ದೇವಸ್ಥಾನ ವಸತಿ ಗೃಹಗಳಲ್ಲಿ  ಕೊಠಡಿ ವ್ಯವಸ್ಥೆ ಇರುವುದಿಲ್ಲ.  ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಇರುತ್ತದೆ.  ಶೀತ, ಜ್ವರ ಇದ್ದವರಿಗೆ ಕಡ್ಡಾಯವಾಗಿ ಪ್ರವೇಶ ಇರುವುದಿಲ್ಲ, 65 ವರ್ಷ ಮೇಲ್ಪಟ್ಟ, 10 ವರ್ಷದ ಕೆಳಗಿನವರಿಗೆ, ಗರ್ಭಿಣಿಯರು ದೇವರ ದರ್ಶನ ಸದ್ಯಕ್ಕೆ ಮುಂದೂಡಬೇಕಾಗುತ್ತದೆ.  ತೀರ್ಥ-ಗಂಧ, ಮಂಗಳಾರತಿ, ಪ್ರಸಾದ, ಅನ್ನಪ್ರಸಾದ ಇರುವುದಿಲ್ಲ. ಕೇವಲ ದೇವರ ದರ್ಶನ ಮಾಡಿ ಬರಬಹುದಾಗಿದೆ. ಒಳಗಡೆ ಕಡ್ಡಾಯವಾಗಿ ಸಾಮಾಜಿಕ ಅಂತರ, ಮುಖವಸ್ತ್ರ ಇರಲೇಬೇಕು.  ಅಡ್ಡಬೀಳುವುದು ಹಾಗೂ ಕೂರುವುದಕ್ಕೆ ಅವಕಾಶ ಇಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

12 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

13 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

21 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

22 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 day ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

2 days ago