Advertisement
ಧಾರ್ಮಿಕ

ಜೂ.8 ರಿಂದ ಭಕ್ತರಿಗೆ ಬಾಗಿಲು ತೆರೆಯುವ ದೇಗುಲ | ದೇಗುಲಗಳಲ್ಲಿ ಇನ್ನು ಎಲ್ಲರಿಗೂ ಹೆಚ್ಚು”ಶುದ್ಧಾಚಾರ”

Share

ಕೊರೊನಾ ಲಾಕ್ಡೌನ್ ನಂತರ ಇದೀಗ ಜೂ.8 ರಿಂದ ದೇವಸ್ಥಾನಗಳ ಬಾಗಿಲು ಭಕ್ತರಿಗೆ ತೆರೆಯುತ್ತಿದೆ. ಇದುವರೆಗೆ ಅರ್ಚಕರು ಹಾಗೂ ಅಗತ್ಯ ಸಿಬಂದಿಗಳು ದೇವಸ್ಥಾನದಲ್ಲಿ  ಪೂಜೆ ಸಹಿತ ಇತರ ತುರ್ತು ಕಾರ್ಯ ಮಾಡುತ್ತಿದ್ದರು. ಜೂ.8 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ದೇವಸ್ಥಾನದ ವಠಾರದಲ್ಲಿ ಇನ್ನೂ ಹೆಚ್ಚು “ಶುದ್ಧಾಚಾರ”ದಿಂದ   ಎಲ್ಲಾ ಭಕ್ತಾದಿಗಳು ಇರಲೇಬೇಕಾಗಿದೆ. ಆಡಳಿತದಿಂದ ತೀರ್ಥಪ್ರಸಾದ ನೀಡುವುದು, ದೇವರಿಗೆ ಅಡ್ಡ ಬೀಳುವುದಕ್ಕೆ ಅವಕಾಶ ನಿರಾಕರಿಸಲಾಗಿದೆ. 


 

ಕೊರೊನಾ ಲಾಕ್ಡೌನ್ ನಂತರ ಜೂ.8 ರಿಂದ ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ದೇಗುಲಗಳು ಭಕ್ತರ ಪ್ರವೇಶಕ್ಕೆ ಬಾಗಿಲು ತೆರೆಯುತ್ತದೆ. ಆದರ ಸರಕಾರ ಕೆಲವೊಂದು ಕಡ್ಡಾಯ ನಿಯಮ ಪಾಲಿಸಲು ಸೂಚಿಸಿದೆ. ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮ ವಹಿಸಿದೆ.

ಕುಕ್ಕೆ ಸುಬ್ರಹ್ಮಣ್ಯದ ಭಕ್ತರ ಪ್ರವೇಶಕ್ಕೆ ವಿವಿಧ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಅದರಲ್ಲಿ  ಪ್ರಮುಖವಾಗಿ ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ಜೂ.30 ರವರೆಗೆ ದೇವಸ್ಥಾನ ವಸತಿ ಗೃಹಗಳಲ್ಲಿ  ಕೊಠಡಿ ವ್ಯವಸ್ಥೆ ಇರುವುದಿಲ್ಲ.  ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಇರುತ್ತದೆ.  ಶೀತ, ಜ್ವರ ಇದ್ದವರಿಗೆ ಕಡ್ಡಾಯವಾಗಿ ಪ್ರವೇಶ ಇರುವುದಿಲ್ಲ, 65 ವರ್ಷ ಮೇಲ್ಪಟ್ಟ, 10 ವರ್ಷದ ಕೆಳಗಿನವರಿಗೆ, ಗರ್ಭಿಣಿಯರು ದೇವರ ದರ್ಶನ ಸದ್ಯಕ್ಕೆ ಮುಂದೂಡಬೇಕಾಗುತ್ತದೆ.  ತೀರ್ಥ-ಗಂಧ, ಮಂಗಳಾರತಿ, ಪ್ರಸಾದ, ಅನ್ನಪ್ರಸಾದ ಇರುವುದಿಲ್ಲ. ಕೇವಲ ದೇವರ ದರ್ಶನ ಮಾಡಿ ಬರಬಹುದಾಗಿದೆ. ಒಳಗಡೆ ಕಡ್ಡಾಯವಾಗಿ ಸಾಮಾಜಿಕ ಅಂತರ, ಮುಖವಸ್ತ್ರ ಇರಲೇಬೇಕು.  ಅಡ್ಡಬೀಳುವುದು ಹಾಗೂ ಕೂರುವುದಕ್ಕೆ ಅವಕಾಶ ಇಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

29 minutes ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

59 minutes ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

15 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago