Advertisement
ಧಾರ್ಮಿಕ

ಜೂ.8 ರಿಂದ ಭಕ್ತರಿಗೆ ಬಾಗಿಲು ತೆರೆಯುವ ದೇಗುಲ | ದೇಗುಲಗಳಲ್ಲಿ ಇನ್ನು ಎಲ್ಲರಿಗೂ ಹೆಚ್ಚು”ಶುದ್ಧಾಚಾರ”

Share

ಕೊರೊನಾ ಲಾಕ್ಡೌನ್ ನಂತರ ಇದೀಗ ಜೂ.8 ರಿಂದ ದೇವಸ್ಥಾನಗಳ ಬಾಗಿಲು ಭಕ್ತರಿಗೆ ತೆರೆಯುತ್ತಿದೆ. ಇದುವರೆಗೆ ಅರ್ಚಕರು ಹಾಗೂ ಅಗತ್ಯ ಸಿಬಂದಿಗಳು ದೇವಸ್ಥಾನದಲ್ಲಿ  ಪೂಜೆ ಸಹಿತ ಇತರ ತುರ್ತು ಕಾರ್ಯ ಮಾಡುತ್ತಿದ್ದರು. ಜೂ.8 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ದೇವಸ್ಥಾನದ ವಠಾರದಲ್ಲಿ ಇನ್ನೂ ಹೆಚ್ಚು “ಶುದ್ಧಾಚಾರ”ದಿಂದ   ಎಲ್ಲಾ ಭಕ್ತಾದಿಗಳು ಇರಲೇಬೇಕಾಗಿದೆ. ಆಡಳಿತದಿಂದ ತೀರ್ಥಪ್ರಸಾದ ನೀಡುವುದು, ದೇವರಿಗೆ ಅಡ್ಡ ಬೀಳುವುದಕ್ಕೆ ಅವಕಾಶ ನಿರಾಕರಿಸಲಾಗಿದೆ. 


 

ಕೊರೊನಾ ಲಾಕ್ಡೌನ್ ನಂತರ ಜೂ.8 ರಿಂದ ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ದೇಗುಲಗಳು ಭಕ್ತರ ಪ್ರವೇಶಕ್ಕೆ ಬಾಗಿಲು ತೆರೆಯುತ್ತದೆ. ಆದರ ಸರಕಾರ ಕೆಲವೊಂದು ಕಡ್ಡಾಯ ನಿಯಮ ಪಾಲಿಸಲು ಸೂಚಿಸಿದೆ. ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮ ವಹಿಸಿದೆ.

ಕುಕ್ಕೆ ಸುಬ್ರಹ್ಮಣ್ಯದ ಭಕ್ತರ ಪ್ರವೇಶಕ್ಕೆ ವಿವಿಧ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಅದರಲ್ಲಿ  ಪ್ರಮುಖವಾಗಿ ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ಜೂ.30 ರವರೆಗೆ ದೇವಸ್ಥಾನ ವಸತಿ ಗೃಹಗಳಲ್ಲಿ  ಕೊಠಡಿ ವ್ಯವಸ್ಥೆ ಇರುವುದಿಲ್ಲ.  ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಇರುತ್ತದೆ.  ಶೀತ, ಜ್ವರ ಇದ್ದವರಿಗೆ ಕಡ್ಡಾಯವಾಗಿ ಪ್ರವೇಶ ಇರುವುದಿಲ್ಲ, 65 ವರ್ಷ ಮೇಲ್ಪಟ್ಟ, 10 ವರ್ಷದ ಕೆಳಗಿನವರಿಗೆ, ಗರ್ಭಿಣಿಯರು ದೇವರ ದರ್ಶನ ಸದ್ಯಕ್ಕೆ ಮುಂದೂಡಬೇಕಾಗುತ್ತದೆ.  ತೀರ್ಥ-ಗಂಧ, ಮಂಗಳಾರತಿ, ಪ್ರಸಾದ, ಅನ್ನಪ್ರಸಾದ ಇರುವುದಿಲ್ಲ. ಕೇವಲ ದೇವರ ದರ್ಶನ ಮಾಡಿ ಬರಬಹುದಾಗಿದೆ. ಒಳಗಡೆ ಕಡ್ಡಾಯವಾಗಿ ಸಾಮಾಜಿಕ ಅಂತರ, ಮುಖವಸ್ತ್ರ ಇರಲೇಬೇಕು.  ಅಡ್ಡಬೀಳುವುದು ಹಾಗೂ ಕೂರುವುದಕ್ಕೆ ಅವಕಾಶ ಇಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

24 minutes ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

20 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago