ಕೊರೊನಾ ಲಾಕ್ಡೌನ್ ನಂತರ ಇದೀಗ ಜೂ.8 ರಿಂದ ದೇವಸ್ಥಾನಗಳ ಬಾಗಿಲು ಭಕ್ತರಿಗೆ ತೆರೆಯುತ್ತಿದೆ. ಇದುವರೆಗೆ ಅರ್ಚಕರು ಹಾಗೂ ಅಗತ್ಯ ಸಿಬಂದಿಗಳು ದೇವಸ್ಥಾನದಲ್ಲಿ ಪೂಜೆ ಸಹಿತ ಇತರ ತುರ್ತು ಕಾರ್ಯ ಮಾಡುತ್ತಿದ್ದರು. ಜೂ.8 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ದೇವಸ್ಥಾನದ ವಠಾರದಲ್ಲಿ ಇನ್ನೂ ಹೆಚ್ಚು “ಶುದ್ಧಾಚಾರ”ದಿಂದ ಎಲ್ಲಾ ಭಕ್ತಾದಿಗಳು ಇರಲೇಬೇಕಾಗಿದೆ. ಆಡಳಿತದಿಂದ ತೀರ್ಥಪ್ರಸಾದ ನೀಡುವುದು, ದೇವರಿಗೆ ಅಡ್ಡ ಬೀಳುವುದಕ್ಕೆ ಅವಕಾಶ ನಿರಾಕರಿಸಲಾಗಿದೆ.
ಕೊರೊನಾ ಲಾಕ್ಡೌನ್ ನಂತರ ಜೂ.8 ರಿಂದ ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ದೇಗುಲಗಳು ಭಕ್ತರ ಪ್ರವೇಶಕ್ಕೆ ಬಾಗಿಲು ತೆರೆಯುತ್ತದೆ. ಆದರ ಸರಕಾರ ಕೆಲವೊಂದು ಕಡ್ಡಾಯ ನಿಯಮ ಪಾಲಿಸಲು ಸೂಚಿಸಿದೆ. ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮ ವಹಿಸಿದೆ.
ಕುಕ್ಕೆ ಸುಬ್ರಹ್ಮಣ್ಯದ ಭಕ್ತರ ಪ್ರವೇಶಕ್ಕೆ ವಿವಿಧ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಅದರಲ್ಲಿ ಪ್ರಮುಖವಾಗಿ ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ಜೂ.30 ರವರೆಗೆ ದೇವಸ್ಥಾನ ವಸತಿ ಗೃಹಗಳಲ್ಲಿ ಕೊಠಡಿ ವ್ಯವಸ್ಥೆ ಇರುವುದಿಲ್ಲ. ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ಇರುತ್ತದೆ. ಶೀತ, ಜ್ವರ ಇದ್ದವರಿಗೆ ಕಡ್ಡಾಯವಾಗಿ ಪ್ರವೇಶ ಇರುವುದಿಲ್ಲ, 65 ವರ್ಷ ಮೇಲ್ಪಟ್ಟ, 10 ವರ್ಷದ ಕೆಳಗಿನವರಿಗೆ, ಗರ್ಭಿಣಿಯರು ದೇವರ ದರ್ಶನ ಸದ್ಯಕ್ಕೆ ಮುಂದೂಡಬೇಕಾಗುತ್ತದೆ. ತೀರ್ಥ-ಗಂಧ, ಮಂಗಳಾರತಿ, ಪ್ರಸಾದ, ಅನ್ನಪ್ರಸಾದ ಇರುವುದಿಲ್ಲ. ಕೇವಲ ದೇವರ ದರ್ಶನ ಮಾಡಿ ಬರಬಹುದಾಗಿದೆ. ಒಳಗಡೆ ಕಡ್ಡಾಯವಾಗಿ ಸಾಮಾಜಿಕ ಅಂತರ, ಮುಖವಸ್ತ್ರ ಇರಲೇಬೇಕು. ಅಡ್ಡಬೀಳುವುದು ಹಾಗೂ ಕೂರುವುದಕ್ಕೆ ಅವಕಾಶ ಇಲ್ಲ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…