ಕುಶಾಲನಗರ: ಸುಳ್ಯದಲ್ಲಿ ಪ್ರಧಾನ ಶಾಖೆಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಶಾಖೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಜೂ.9 ರಂದು ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗೌಡರ ಯುವ ಸೇವಾ ಸಂಘ ಪ್ರವರ್ತಿತ ಸಂಸ್ಥೆಯ 11ನೇ ಶಾಖೆಯು ಕುಶಾಲನಗರ ಬಿ.ಎಂ.ರೋಡ್ ನಲ್ಲಿಯ ಬೈಚನಹಳ್ಳಿ ಆತ್ಮೀಯ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸುವರು. ವೆಂಕಟರಮಣ ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸುವರು. ಗಣಕೀಕರಣವನ್ನು ಮಡಿಕೇರಿ ಶಾಸಕ ಅಪ್ಪಚ್ಚುರಂಜನ್, ಭದ್ರತಾ ಕೊಠಡಿಯನ್ನು ಮಾಜಿ ಸಚಿವ ಬಿ.ಎ.ಜೀವಿಜಯ ಉದ್ಘಾಟಿಸುವರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೇಚಪ್ಪನ ಮೋಹನಕುಮಾರ್, ಪ್ರಥಮ ಪಾಲುಪತ್ರ ವಿತರಣೆಯನ್ನು ಪೊಲೀಸ್ ಉಪ ಅಧೀಕ್ಷಕ ಮುರಳೀಧರ ಪಿ.ಕೆ, ಪ್ರಥಮ ಸಾಲಪತ್ರ ವಿತರಣೆಯನ್ನು ಪಟ್ಟಣ ಪಂಚಾಯತ್ ಸದಸ್ಯೆ ರೇಣುಕಾ ಜಗದೀಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ಲಾಂಟರ್ ದಂಬೆಕೋಡಿ ಲವಕುಮಾರ್, ವಕೀಲರಾದ ತೆಕ್ಕೆಡೆ ನೇಮಿರಾಜ್, ಆತ್ಮೀಯ ಕಾಂಪ್ಲೆಕ್ಸ್ ಮಾಲಕಿ ಡಿ.ಎಚ್.ರುಕ್ಮಿಣಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಪಿ.ಸಿ.ಜಯರಾಮ, ಚಂದ್ರ ಕೋಲ್ಚಾರ್, ಜಾಕೆ ಸದಾನಂದ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ಉಪಸ್ಥಿತರಿದ್ದರು.
–
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…