ಮಡಿಕೇರಿ : ಜಾತ್ಯಾತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಅಕ್ಟೋಬರ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡಿ, ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ ಎಂದು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ತಮ್ಮ ನೇತೃತ್ವದ ಜಿಲ್ಲಾ ಜೆಡಿಎಸ್ ನಿಯೋಗ ಮಾಜಿ ಪ್ರಧಾನಿ ದೇವೆಗೌಡರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಪಕ್ಷದೊಳಗಿನ ಗೊಂದಲಗಳನ್ನು ನಿವಾರಿಸಿಕೊಂಡಿರುವುದಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರನ್ನು ಬದಲಾಯಿಸುವುದಿಲ್ಲ ಎನ್ನುವ ಭರವಸೆ ರಾಷ್ಟ್ರೀಯ ಅಧ್ಯಕ್ಷರಿಂದ ಬಂದಿದೆ ಎಂದು ಸಂಕೇತ್ ಪೂವಯ್ಯ ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಲಿರುವ ದೇವೇಗೌಡರು ಜಿಲ್ಲಾಧ್ಯಕ್ಷ ಗಣೇಶ್ ಅವರಿಗೆ ಸಹಕಾರ ನೀಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಸಧ್ಯದಲ್ಲಿಯೇ ಮಧ್ಯಂತರ ಚುನಾವಣೆ ಬರಬಹುದೆಂದು ನಿರೀಕ್ಷಿಸಿರುವ ದೇವೆಗೌಡರು ಪಕ್ಷ ಸಂಘಟನೆಗೆ ಒಲವು ತೋರಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೆ.ಎಂ.ಗಣೇಶ್ ಅವರು ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆಗೊಳಿಸುವ ಚತುರತೆಯನ್ನು ಹೊಂದಿದ್ದಾರೆ ಎನ್ನುವ ವಿಶ್ವಾಸ ದೇವೇಗೌಡರಿಗಿದೆ. ಇದೇ ಕಾರಣದಿಂದ ಗಣೇಶ್ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸುವುದಿಲ್ಲವೆಂದು ಭರವಸೆ ನೀಡಿರುವುದಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಕೊಡಗು ಜೆಡಿಎಸ್ ನಿಯೋಗದೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಗೌಡರು ಈ ಹಿಂದೆ ಜಿಲ್ಲಾಧ್ಯಕ್ಷ ಸ್ಥಾನದ ಕುರಿತು ಎರಡು ಗುಂಪುಗಳ ನಡುವೆ ನಡೆದ ಮಾತಿನ ಚಕಮಕಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು ಎಂದು ತಿಳಿಸಿರುವ ಸಂಕೇತ್ ಪೂವಯ್ಯ, ಗಣೇಶ್ ಅವರಲ್ಲಿ ಸಂಘಟನಾ ಶಕ್ತಿ ಇರುವುದರಿಂದ ಅವರೇ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ದೇವೇಗೌಡರನ್ನು ಭೇಟಿಯಾದ ನಿಯೋಗದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಖಜಾಂಚಿ ಡೆನ್ನಿ ಬರೋಸ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನೀಲ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ಖಾನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ಶಾಂತಿ ಅಚ್ಚಪ್ಪ, ತಾಲೂಕು ಅಧ್ಯಕ್ಷೆ ಪಿ.ಕುಸುಮಾವತಿ ಮತ್ತಿತರರು ಹಾಜರಿದ್ದರು. ಫೋಟೋ :: ದೇವೇಗೌಡ
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…