Advertisement
ಸುದ್ದಿಗಳು

ಜೆಡಿಎಸ್ ಜಿಲ್ಲಾಧ್ಯಕ್ಷರ ಬದಲಾವಣೆ ಇಲ್ಲ : ಕೊಡಗು ನಿಯೋಗಕ್ಕೆ ಹೆಚ್.ಡಿ.ದೇವೇಗೌಡರ ಭರವಸೆ

Share

ಮಡಿಕೇರಿ  : ಜಾತ್ಯಾತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಅಕ್ಟೋಬರ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡಿ, ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ ಎಂದು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.

ತಮ್ಮ ನೇತೃತ್ವದ ಜಿಲ್ಲಾ ಜೆಡಿಎಸ್ ನಿಯೋಗ ಮಾಜಿ ಪ್ರಧಾನಿ ದೇವೆಗೌಡರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಪಕ್ಷದೊಳಗಿನ ಗೊಂದಲಗಳನ್ನು ನಿವಾರಿಸಿಕೊಂಡಿರುವುದಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರನ್ನು ಬದಲಾಯಿಸುವುದಿಲ್ಲ ಎನ್ನುವ ಭರವಸೆ ರಾಷ್ಟ್ರೀಯ ಅಧ್ಯಕ್ಷರಿಂದ ಬಂದಿದೆ ಎಂದು ಸಂಕೇತ್ ಪೂವಯ್ಯ ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಲಿರುವ ದೇವೇಗೌಡರು ಜಿಲ್ಲಾಧ್ಯಕ್ಷ ಗಣೇಶ್ ಅವರಿಗೆ ಸಹಕಾರ ನೀಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಸಧ್ಯದಲ್ಲಿಯೇ ಮಧ್ಯಂತರ ಚುನಾವಣೆ ಬರಬಹುದೆಂದು ನಿರೀಕ್ಷಿಸಿರುವ ದೇವೆಗೌಡರು ಪಕ್ಷ ಸಂಘಟನೆಗೆ ಒಲವು ತೋರಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೆ.ಎಂ.ಗಣೇಶ್ ಅವರು ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಸಂಘಟನೆಗೊಳಿಸುವ ಚತುರತೆಯನ್ನು ಹೊಂದಿದ್ದಾರೆ ಎನ್ನುವ ವಿಶ್ವಾಸ ದೇವೇಗೌಡರಿಗಿದೆ. ಇದೇ ಕಾರಣದಿಂದ ಗಣೇಶ್ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸುವುದಿಲ್ಲವೆಂದು ಭರವಸೆ ನೀಡಿರುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಕೊಡಗು ಜೆಡಿಎಸ್ ನಿಯೋಗದೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಗೌಡರು ಈ ಹಿಂದೆ ಜಿಲ್ಲಾಧ್ಯಕ್ಷ ಸ್ಥಾನದ ಕುರಿತು ಎರಡು ಗುಂಪುಗಳ ನಡುವೆ ನಡೆದ ಮಾತಿನ ಚಕಮಕಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು ಎಂದು ತಿಳಿಸಿರುವ ಸಂಕೇತ್ ಪೂವಯ್ಯ, ಗಣೇಶ್ ಅವರಲ್ಲಿ ಸಂಘಟನಾ ಶಕ್ತಿ ಇರುವುದರಿಂದ ಅವರೇ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ದೇವೇಗೌಡರನ್ನು ಭೇಟಿಯಾದ ನಿಯೋಗದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಖಜಾಂಚಿ ಡೆನ್ನಿ ಬರೋಸ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನೀಲ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್‍ಖಾನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ಶಾಂತಿ ಅಚ್ಚಪ್ಪ, ತಾಲೂಕು ಅಧ್ಯಕ್ಷೆ ಪಿ.ಕುಸುಮಾವತಿ ಮತ್ತಿತರರು ಹಾಜರಿದ್ದರು. ಫೋಟೋ :: ದೇವೇಗೌಡ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago