Advertisement
ಸುದ್ದಿಗಳು

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವಲಯ ಯುವಜೇಸೀ ತರಬೇತಿ ಕಮ್ಮಟ

Share

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಆತಿಥ್ಯದಲ್ಲಿ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ವಲಯ ಯುವ ಜೇಸಿ ತರಬೇತಿ ಕಮ್ಮಟ `ಬೋರ್ನ್ ಟು ಬ್ಲೋಸಂ 2020′ ಕಾರ್ಯಾಗಾರ ಸುಳ್ಯ ಪರಿವಾರಕಾನದಲ್ಲಿ ಜರುಗಿತು. ಕಾರ್ಯಾಗಾರವನ್ನು ವಲಯಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಉದ್ಘಾಟಿಸಿದರು. ಜೇಸೀಯಂತಹ ವ್ಯಕ್ತಿತ್ವ ವಿಕಸನ ಸಂಸ್ಥೆಯಲ್ಲಿ ಯುವ ಜನಾಂಗ ತಮ್ಮನ್ನು ತಾವು ತೊಡಗಿಸಿಕೊಂಡಾಗ ಭವಿಷ್ಯದಲ್ಲಿ ಪರಿಪೂರ್ಣ ನಾಯಕರಾಗಿ ಮೂಡಿಬರಲು ಸಹಕಾರಿಯಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ. ಆರ್. ಗಂಗಾಧರ ಮಾತನಾಡಿ `ದುಶ್ಚಟಗಳಿಂದ ದೂರವಿದ್ದು ಮಾದರಿ ಜೀವನವನ್ನು ನಡೆಸಿಕೊಂಡು, ಹಿರಿಯರನ್ನು ಗೌರವಿಸುವ ಮನೋಭಾವದ ಯುವ ಮನಸ್ಸು ಮುಂದಿನ ತಲೆಮಾರಿನ ದೊಡ್ಡ ಆಸ್ತಿ ಎಂದರು. ಜೇಸೀಐ ಮಾಜಿ ರಾಷ್ಟ್ರೀಯ ನಿರ್ದೇಶಕ ಚಂದ್ರಶೇಖರ ನಾಯರ್, ನಿಕಟಪೂರ್ವ ವಲಯಾಧ್ಯಕ್ಷ ಅಶೋಕ್ ಚೂಂತಾರು, ಪ್ರಾಂತ್ಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ, ಯುವ ಜೇಸಿ ತರಬೇತಿ ಕಮ್ಮಟದ ಮುಖ್ಯ ತರಬೇತುದಾರ ಸತೀಶ್ ಭಟ್ ಬಿಳಿನೆಲೆ ಮತ್ತು ಜೇಸೀ ರಾಷ್ಟ್ರ ತರಬೇತುದಾರರಾದ ರಾಜೇಶ್ವರಿ ಡಿ. ಶೆಟ್ಟಿಯವರು ಉಪಸ್ಥಿತರಿದ್ದರು.

ವಲಯ ಯುವ ಜೇಸೀ ನಿರ್ದೇಶಕ ಮರಿಯಪ್ಪ ಸಭಾಧ್ಯಕ್ಷತೆ ವಹಿಸಿದ್ದರು. ಸುಳ್ಯ ಪಯಸ್ವಿನಿ ಜೇಸಿ ಅಧ್ಯಕ್ಷ ದೇವರಾಜ್ ಕುದ್ಪಾಜೆ, ಸಂಯೋಜಕ ಗುರುರಾಜ್ ಅಜ್ಜಾವರ, ಜೇಸೀರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್, ಯುವ ಜೇಸಿ ಅಧ್ಯಕ್ಷ ಚಿತ್ತಾರ ಬಂಟ್ವಾಳ್ ಮತ್ತು ಕಾರ್ಯದರ್ಶಿ ಚೇತನ ಅಮೆಮನೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

24 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago