ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ನಡೆದಿದೆ. ಈ ಸಭೆಯಲ್ಲಿ ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್ ಲೈನ್ ಮೂಲಕ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.
ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…