ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ನಡೆದಿದೆ. ಈ ಸಭೆಯಲ್ಲಿ ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್ ಲೈನ್ ಮೂಲಕ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.
ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…