ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ನಡೆದಿದೆ. ಈ ಸಭೆಯಲ್ಲಿ ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್ ಲೈನ್ ಮೂಲಕ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.
ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…