ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ನಡೆದಿದೆ. ಈ ಸಭೆಯಲ್ಲಿ ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್ ಲೈನ್ ಮೂಲಕ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.
ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…