ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ನಡೆದಿದೆ. ಈ ಸಭೆಯಲ್ಲಿ ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್ ಲೈನ್ ಮೂಲಕ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.
ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…