ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ನಡೆದಿದೆ. ಈ ಸಭೆಯಲ್ಲಿ ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್ ಲೈನ್ ಮೂಲಕ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.
ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…