ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ. ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಭೆ ನಡೆದಿದೆ. ಈ ಸಭೆಯಲ್ಲಿ ಆ. 5 ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ. 15 ಟ್ರಸ್ಟಿಗಳಲ್ಲಿ 12 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಆನ್ ಲೈನ್ ಮೂಲಕ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನಶ್ರೀಗಳು ಭಾಗವಹಿಸಿದ್ದರು.
ಸುಮಾರು 3೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದರ ಜೊತೆಗೆ ಆಸುಪಾಸಿನ 70 ಎಕ್ರೆ ಪರಿಸರದ ಅಭಿವೃದ್ದಿಗೆ 1000 ಕೋಟಿ ರೂ ಅವಶ್ಯಕತೆ ಇದೆ. ಇದಕ್ಕಾಗಿ ಬೇರೆ ಬೇರ ಕಂಪೆನಿಗಳ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡಲಾಗುವುದು ಅಲ್ಲದೆ ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಹಣ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರತೀ ವ್ಯಕ್ತಿ ಈ ಕಾರ್ಯದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.ಇದಕ್ಕಾಗಿ ವ್ಯಾಪಕ ಆಂದೋಲನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ದೇಶದಾದ್ಯಂತ ಈ ಆಂದೋಲನ ನವೆಂಬರ್ 25 ರಿಂದ ಡಿಸೆಂಬರ್ 25ತನಕ ವ್ಯಾಪಕ ಆಂದೋಲನ ನಡೆಯಲಿದೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…