Advertisement
MIRROR FOCUS

ಜೋಡುಪಾಲದಲ್ಲಿ ಕಾಡಾನೆಗಳ ಕಾಟ : ಸಹಾಯಕ್ಕೆ ಗ್ರಾಮಸ್ಥರ ಮೊರೆ : ಅರಣ್ಯ ಇಲಾಖೆಗೆ ಮನವಿ…

Share

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇರುವ ಮಡಿಕೇರಿಯ ಜೋಡುಪಾಲ ಗ್ರಾಮದಲ್ಲಿ ಕಳೆದ ಹತ್ತು ದಿನಗಳಿಂದ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಸುಮಾರು ನಾಲ್ಕರಿಂದ ಐದು ಕಾಡಾನೆಗಳ ಹಿಂಡು ಗ್ರಾಮದ ಬಹುತೇಕ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement

ಅ.17 ರಂದೇ ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ನೀಡಿದ ಗ್ರಾಮಸ್ಥರು ಆನೆಗಳನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದರು. ಆದರೆ ಅ.20 ಕ್ಕೆ ಗ್ರಾಮಕ್ಕೆ ಭೇಟಿ ನೀಡಿದ ಡಿಆರ್‍ಎಫ್‍ಒ ಹಾಗೂ ಸಿಬ್ಬಂದಿ ವರ್ಗ ಕಾಡಾನೆ ವಿರುದ್ಧ ಕಾರ್ಯಾಚರಣೆ ನಡೆಸದೆ ಮಳೆ ಬಂತು ಎನ್ನುವ ನೆಪವೊಡ್ಡಿ ಮರಳಿದ್ದಾರೆ. ಸ್ಥಳೀಯರು ಜೀವ ಭಯದಲ್ಲಿದ್ದರೂ ಕನಿಷ್ಠ ಪಟಾಕಿಯನ್ನು ಕೂಡ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಇಂದು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

Advertisement

ಕಾಡಾನೆಗಳು ಬಹುತೇಕ ಎಲ್ಲಾ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಪಡಿಸಿವೆ. ಕಾಫಿ ಹಾಗೂ ಬಾಳೆ ಕೃಷಿ ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಲಕ್ಷಾಂತರ ರೂ.ನಷ್ಟವಾಗಿದೆ ಎಂದು ತಿಳಿಸಿರುವ ಸ್ಥಳೀಯರು, ಅರಣ್ಯ ಇಲಾಖೆ ಜೀವಹಾನಿ ಸಂಭವಿಸುವ ಮೊದಲು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮನವಿ ನೀಡುವ ಸಂದರ್ಭ ಗ್ರಾಮದ ಪ್ರಮುಖರಾದ ಜಿ.ಎ.ಶರ್ಮಿಳ, ಪ್ರಮೀಳ, ಸುನೀಲ್, ಸುಂದರ ನಾಯಕ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

6 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

12 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

1 day ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

1 day ago