Advertisement
MIRROR FOCUS

ಜೋಡುಪಾಲದಲ್ಲಿ ಕಾಡಾನೆಗಳ ಕಾಟ : ಸಹಾಯಕ್ಕೆ ಗ್ರಾಮಸ್ಥರ ಮೊರೆ : ಅರಣ್ಯ ಇಲಾಖೆಗೆ ಮನವಿ…

Share

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇರುವ ಮಡಿಕೇರಿಯ ಜೋಡುಪಾಲ ಗ್ರಾಮದಲ್ಲಿ ಕಳೆದ ಹತ್ತು ದಿನಗಳಿಂದ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಸುಮಾರು ನಾಲ್ಕರಿಂದ ಐದು ಕಾಡಾನೆಗಳ ಹಿಂಡು ಗ್ರಾಮದ ಬಹುತೇಕ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಅ.17 ರಂದೇ ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ನೀಡಿದ ಗ್ರಾಮಸ್ಥರು ಆನೆಗಳನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದರು. ಆದರೆ ಅ.20 ಕ್ಕೆ ಗ್ರಾಮಕ್ಕೆ ಭೇಟಿ ನೀಡಿದ ಡಿಆರ್‍ಎಫ್‍ಒ ಹಾಗೂ ಸಿಬ್ಬಂದಿ ವರ್ಗ ಕಾಡಾನೆ ವಿರುದ್ಧ ಕಾರ್ಯಾಚರಣೆ ನಡೆಸದೆ ಮಳೆ ಬಂತು ಎನ್ನುವ ನೆಪವೊಡ್ಡಿ ಮರಳಿದ್ದಾರೆ. ಸ್ಥಳೀಯರು ಜೀವ ಭಯದಲ್ಲಿದ್ದರೂ ಕನಿಷ್ಠ ಪಟಾಕಿಯನ್ನು ಕೂಡ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಇಂದು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಕಾಡಾನೆಗಳು ಬಹುತೇಕ ಎಲ್ಲಾ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಪಡಿಸಿವೆ. ಕಾಫಿ ಹಾಗೂ ಬಾಳೆ ಕೃಷಿ ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಲಕ್ಷಾಂತರ ರೂ.ನಷ್ಟವಾಗಿದೆ ಎಂದು ತಿಳಿಸಿರುವ ಸ್ಥಳೀಯರು, ಅರಣ್ಯ ಇಲಾಖೆ ಜೀವಹಾನಿ ಸಂಭವಿಸುವ ಮೊದಲು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮನವಿ ನೀಡುವ ಸಂದರ್ಭ ಗ್ರಾಮದ ಪ್ರಮುಖರಾದ ಜಿ.ಎ.ಶರ್ಮಿಳ, ಪ್ರಮೀಳ, ಸುನೀಲ್, ಸುಂದರ ನಾಯಕ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

2 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

3 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

13 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

14 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

19 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

19 hours ago