ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇರುವ ಮಡಿಕೇರಿಯ ಜೋಡುಪಾಲ ಗ್ರಾಮದಲ್ಲಿ ಕಳೆದ ಹತ್ತು ದಿನಗಳಿಂದ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಸುಮಾರು ನಾಲ್ಕರಿಂದ ಐದು ಕಾಡಾನೆಗಳ ಹಿಂಡು ಗ್ರಾಮದ ಬಹುತೇಕ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಅ.17 ರಂದೇ ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ನೀಡಿದ ಗ್ರಾಮಸ್ಥರು ಆನೆಗಳನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದರು. ಆದರೆ ಅ.20 ಕ್ಕೆ ಗ್ರಾಮಕ್ಕೆ ಭೇಟಿ ನೀಡಿದ ಡಿಆರ್ಎಫ್ಒ ಹಾಗೂ ಸಿಬ್ಬಂದಿ ವರ್ಗ ಕಾಡಾನೆ ವಿರುದ್ಧ ಕಾರ್ಯಾಚರಣೆ ನಡೆಸದೆ ಮಳೆ ಬಂತು ಎನ್ನುವ ನೆಪವೊಡ್ಡಿ ಮರಳಿದ್ದಾರೆ. ಸ್ಥಳೀಯರು ಜೀವ ಭಯದಲ್ಲಿದ್ದರೂ ಕನಿಷ್ಠ ಪಟಾಕಿಯನ್ನು ಕೂಡ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಇಂದು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಾಡಾನೆಗಳು ಬಹುತೇಕ ಎಲ್ಲಾ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಪಡಿಸಿವೆ. ಕಾಫಿ ಹಾಗೂ ಬಾಳೆ ಕೃಷಿ ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಲಕ್ಷಾಂತರ ರೂ.ನಷ್ಟವಾಗಿದೆ ಎಂದು ತಿಳಿಸಿರುವ ಸ್ಥಳೀಯರು, ಅರಣ್ಯ ಇಲಾಖೆ ಜೀವಹಾನಿ ಸಂಭವಿಸುವ ಮೊದಲು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮನವಿ ನೀಡುವ ಸಂದರ್ಭ ಗ್ರಾಮದ ಪ್ರಮುಖರಾದ ಜಿ.ಎ.ಶರ್ಮಿಳ, ಪ್ರಮೀಳ, ಸುನೀಲ್, ಸುಂದರ ನಾಯಕ ಮತ್ತಿತರರು ಹಾಜರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…