Advertisement
MIRROR FOCUS

ಜೋಡುಪಾಲದಲ್ಲಿ ಕಾಡಾನೆಗಳ ಕಾಟ : ಸಹಾಯಕ್ಕೆ ಗ್ರಾಮಸ್ಥರ ಮೊರೆ : ಅರಣ್ಯ ಇಲಾಖೆಗೆ ಮನವಿ…

Share

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇರುವ ಮಡಿಕೇರಿಯ ಜೋಡುಪಾಲ ಗ್ರಾಮದಲ್ಲಿ ಕಳೆದ ಹತ್ತು ದಿನಗಳಿಂದ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಸುಮಾರು ನಾಲ್ಕರಿಂದ ಐದು ಕಾಡಾನೆಗಳ ಹಿಂಡು ಗ್ರಾಮದ ಬಹುತೇಕ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಅ.17 ರಂದೇ ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ನೀಡಿದ ಗ್ರಾಮಸ್ಥರು ಆನೆಗಳನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದರು. ಆದರೆ ಅ.20 ಕ್ಕೆ ಗ್ರಾಮಕ್ಕೆ ಭೇಟಿ ನೀಡಿದ ಡಿಆರ್‍ಎಫ್‍ಒ ಹಾಗೂ ಸಿಬ್ಬಂದಿ ವರ್ಗ ಕಾಡಾನೆ ವಿರುದ್ಧ ಕಾರ್ಯಾಚರಣೆ ನಡೆಸದೆ ಮಳೆ ಬಂತು ಎನ್ನುವ ನೆಪವೊಡ್ಡಿ ಮರಳಿದ್ದಾರೆ. ಸ್ಥಳೀಯರು ಜೀವ ಭಯದಲ್ಲಿದ್ದರೂ ಕನಿಷ್ಠ ಪಟಾಕಿಯನ್ನು ಕೂಡ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಇಂದು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಕಾಡಾನೆಗಳು ಬಹುತೇಕ ಎಲ್ಲಾ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಪಡಿಸಿವೆ. ಕಾಫಿ ಹಾಗೂ ಬಾಳೆ ಕೃಷಿ ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಲಕ್ಷಾಂತರ ರೂ.ನಷ್ಟವಾಗಿದೆ ಎಂದು ತಿಳಿಸಿರುವ ಸ್ಥಳೀಯರು, ಅರಣ್ಯ ಇಲಾಖೆ ಜೀವಹಾನಿ ಸಂಭವಿಸುವ ಮೊದಲು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮನವಿ ನೀಡುವ ಸಂದರ್ಭ ಗ್ರಾಮದ ಪ್ರಮುಖರಾದ ಜಿ.ಎ.ಶರ್ಮಿಳ, ಪ್ರಮೀಳ, ಸುನೀಲ್, ಸುಂದರ ನಾಯಕ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

10 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

10 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

16 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago