Advertisement
ಮಾಹಿತಿ

ಜ್ಞಾನದೀಪದಲ್ಲಿ ನರ್ಸರಿ ಶಾಲಾ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

Share

ಬೆಳ್ಳಾರೆ : ಭಾರತ ಸರಕಾರದ ಯೋಜನಾ ಆಯೋಗದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಾದ ಭಾರತ್ ಸೇವಕ್ ಸಮಾಜದ ವತಿಯಿಂದ ಸುಳ್ಯ ಮತ್ತು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 2019-20ನೇ ಸಾಲಿನ ಒಂದು ವರ್ಷದ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ತರಬೇತಿಗೆ ಸೇರಬಹುದಾಗಿದ್ದು, ತರಬೇತಿ ಪೂರ್ಣಗೊಳಿಸಿದವರಿಗೆ ಭಾರತ್ ಸೇವಕ್ ಸಮಾಜದ ಪ್ರಮಾಣ ಪತ್ರ ನೀಡಲಾಗುತ್ತದೆ. ತರಬೇತಿ ಪಡೆದವರಿಗೆ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಮೊಂಟೆಸ್ಸರಿ ಶಿಕ್ಷಕಿಯರಾಗಿ, ಪಬ್ಲಿಕ್ ಸ್ಕೂಲ್‍ಗಳಲ್ಲಿ ನರ್ಸರಿ/ಮೊಂಟೆಸ್ಸರಿ ಶಿಕ್ಷಕಿಯರುಗಳಾಗಿ, ಅಡಲ್ಟ್ ಎಜ್ಯುಕೇಶನ್ ಸೆಂಟರ್‍ಗಳಲ್ಲಿ ಶಿಕ್ಷಕಿಯರುಗಳಾಗಿ, ಆರ್ಟ್ ಮತ್ತು ಕ್ರಾಫ್ಟ್ ಶಿಕ್ಷಕಿಯರುಗಳಾಗಿ ಸೇವೆ ಸಲ್ಲಿಸಬಹುದು ಅಥವಾ ಸ್ವಂತ ಪ್ಲೇಸ್ಕೂಲ್, ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬಹುದು. ಜ್ಞಾನದೀಪ ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ಈ ತರಬೇತಿಯನ್ನು ನಡೆಸಲಾಗುತ್ತಿದೆ.

ಜೂ.9ರಂದು ಉಚಿತ ಮಾಹಿತಿ ಕಾರ್ಯಾಗಾರ :

2019-20ನೇ ಸಾಲಿನ ದಾಖಲಾತಿಗಾಗಿ ಉಚಿತ ಮಾಹಿತಿ ಕಾರ್ಯಾಗಾರವು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಜೂ.9ರಂದು ಬೆಳಿಗ್ಗೆ 10.00ಗಂಟೆಗೆ ನಡೆಯಲಿದೆ. ಭಾರತ್ ಸೇವಕ್ ಸಮಾಜದ ವತಿಯಿಂದ ನಡೆಸಲ್ಪಡುವ ನರ್ಸರಿ ಶಾಲಾ ಶಿಕ್ಷಕಿಯರ ತರಬೇತಿ ಪ್ರಮಾಣ ಪತ್ರವು ದೇಶ ವಿದೇಶಗಳಲ್ಲಿ ಉದ್ಯೋಗ ಪಡೆಯಲು ಮಾನ್ಯತೆ ಹೊಂದಿದ್ದು, ಜ್ಞಾನದೀಪ ತರಬೇತಿ ಸಂಸ್ಥೆಯಲ್ಲಿ ಈ ತರಬೇತಿಯನ್ನು ಬಿ.ಎಡ್, ಡಿ.ಎಡ್ ಶಿಕ್ಷಣದ ಮಾದರಿಯಲ್ಲಿ ನೀಡಲಾಗುತ್ತಿದೆ. ಪಿಯುಸಿ ಅಥವಾ ಪದವಿ ಮುಗಿಸಿದ ಬಳಿಕ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಉದ್ಯೋಗ ಪಡೆಯಲು ಈ ತರಬೇತಿಯನ್ನು ಪಡೆಯುವುದು ಅವಶ್ಯಕವಾಗಿದ್ದು ತರಬೇತಿ ಪಡೆಯಲಿಚ್ಚಿಸುವವರು ಉಚಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ತರಬೇತಿಯ ಪೂರ್ಣ ವಿವರಗಳನ್ನು ಪಡೆದುಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago