ಬೆಳ್ಳಾರೆ : ಭಾರತ ಸರಕಾರದ ಯೋಜನಾ ಆಯೋಗದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಾದ ಭಾರತ್ ಸೇವಕ್ ಸಮಾಜದ ವತಿಯಿಂದ ಸುಳ್ಯ ಮತ್ತು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 2019-20ನೇ ಸಾಲಿನ ಒಂದು ವರ್ಷದ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ತರಬೇತಿಗೆ ಸೇರಬಹುದಾಗಿದ್ದು, ತರಬೇತಿ ಪೂರ್ಣಗೊಳಿಸಿದವರಿಗೆ ಭಾರತ್ ಸೇವಕ್ ಸಮಾಜದ ಪ್ರಮಾಣ ಪತ್ರ ನೀಡಲಾಗುತ್ತದೆ. ತರಬೇತಿ ಪಡೆದವರಿಗೆ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಮೊಂಟೆಸ್ಸರಿ ಶಿಕ್ಷಕಿಯರಾಗಿ, ಪಬ್ಲಿಕ್ ಸ್ಕೂಲ್ಗಳಲ್ಲಿ ನರ್ಸರಿ/ಮೊಂಟೆಸ್ಸರಿ ಶಿಕ್ಷಕಿಯರುಗಳಾಗಿ, ಅಡಲ್ಟ್ ಎಜ್ಯುಕೇಶನ್ ಸೆಂಟರ್ಗಳಲ್ಲಿ ಶಿಕ್ಷಕಿಯರುಗಳಾಗಿ, ಆರ್ಟ್ ಮತ್ತು ಕ್ರಾಫ್ಟ್ ಶಿಕ್ಷಕಿಯರುಗಳಾಗಿ ಸೇವೆ ಸಲ್ಲಿಸಬಹುದು ಅಥವಾ ಸ್ವಂತ ಪ್ಲೇಸ್ಕೂಲ್, ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬಹುದು. ಜ್ಞಾನದೀಪ ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ಈ ತರಬೇತಿಯನ್ನು ನಡೆಸಲಾಗುತ್ತಿದೆ.
ಜೂ.9ರಂದು ಉಚಿತ ಮಾಹಿತಿ ಕಾರ್ಯಾಗಾರ :
2019-20ನೇ ಸಾಲಿನ ದಾಖಲಾತಿಗಾಗಿ ಉಚಿತ ಮಾಹಿತಿ ಕಾರ್ಯಾಗಾರವು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಜೂ.9ರಂದು ಬೆಳಿಗ್ಗೆ 10.00ಗಂಟೆಗೆ ನಡೆಯಲಿದೆ. ಭಾರತ್ ಸೇವಕ್ ಸಮಾಜದ ವತಿಯಿಂದ ನಡೆಸಲ್ಪಡುವ ನರ್ಸರಿ ಶಾಲಾ ಶಿಕ್ಷಕಿಯರ ತರಬೇತಿ ಪ್ರಮಾಣ ಪತ್ರವು ದೇಶ ವಿದೇಶಗಳಲ್ಲಿ ಉದ್ಯೋಗ ಪಡೆಯಲು ಮಾನ್ಯತೆ ಹೊಂದಿದ್ದು, ಜ್ಞಾನದೀಪ ತರಬೇತಿ ಸಂಸ್ಥೆಯಲ್ಲಿ ಈ ತರಬೇತಿಯನ್ನು ಬಿ.ಎಡ್, ಡಿ.ಎಡ್ ಶಿಕ್ಷಣದ ಮಾದರಿಯಲ್ಲಿ ನೀಡಲಾಗುತ್ತಿದೆ. ಪಿಯುಸಿ ಅಥವಾ ಪದವಿ ಮುಗಿಸಿದ ಬಳಿಕ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಉದ್ಯೋಗ ಪಡೆಯಲು ಈ ತರಬೇತಿಯನ್ನು ಪಡೆಯುವುದು ಅವಶ್ಯಕವಾಗಿದ್ದು ತರಬೇತಿ ಪಡೆಯಲಿಚ್ಚಿಸುವವರು ಉಚಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ತರಬೇತಿಯ ಪೂರ್ಣ ವಿವರಗಳನ್ನು ಪಡೆದುಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…