Advertisement
ಮಾಹಿತಿ

ಜ್ಞಾನದೀಪದಲ್ಲಿ ನರ್ಸರಿ ಶಾಲಾ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ

Share

ಬೆಳ್ಳಾರೆ : ಭಾರತ ಸರಕಾರದ ಯೋಜನಾ ಆಯೋಗದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಾದ ಭಾರತ್ ಸೇವಕ್ ಸಮಾಜದ ವತಿಯಿಂದ ಸುಳ್ಯ ಮತ್ತು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 2019-20ನೇ ಸಾಲಿನ ಒಂದು ವರ್ಷದ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ತರಬೇತಿಗೆ ಸೇರಬಹುದಾಗಿದ್ದು, ತರಬೇತಿ ಪೂರ್ಣಗೊಳಿಸಿದವರಿಗೆ ಭಾರತ್ ಸೇವಕ್ ಸಮಾಜದ ಪ್ರಮಾಣ ಪತ್ರ ನೀಡಲಾಗುತ್ತದೆ. ತರಬೇತಿ ಪಡೆದವರಿಗೆ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಮೊಂಟೆಸ್ಸರಿ ಶಿಕ್ಷಕಿಯರಾಗಿ, ಪಬ್ಲಿಕ್ ಸ್ಕೂಲ್‍ಗಳಲ್ಲಿ ನರ್ಸರಿ/ಮೊಂಟೆಸ್ಸರಿ ಶಿಕ್ಷಕಿಯರುಗಳಾಗಿ, ಅಡಲ್ಟ್ ಎಜ್ಯುಕೇಶನ್ ಸೆಂಟರ್‍ಗಳಲ್ಲಿ ಶಿಕ್ಷಕಿಯರುಗಳಾಗಿ, ಆರ್ಟ್ ಮತ್ತು ಕ್ರಾಫ್ಟ್ ಶಿಕ್ಷಕಿಯರುಗಳಾಗಿ ಸೇವೆ ಸಲ್ಲಿಸಬಹುದು ಅಥವಾ ಸ್ವಂತ ಪ್ಲೇಸ್ಕೂಲ್, ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬಹುದು. ಜ್ಞಾನದೀಪ ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ಈ ತರಬೇತಿಯನ್ನು ನಡೆಸಲಾಗುತ್ತಿದೆ.

ಜೂ.9ರಂದು ಉಚಿತ ಮಾಹಿತಿ ಕಾರ್ಯಾಗಾರ :

2019-20ನೇ ಸಾಲಿನ ದಾಖಲಾತಿಗಾಗಿ ಉಚಿತ ಮಾಹಿತಿ ಕಾರ್ಯಾಗಾರವು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಜೂ.9ರಂದು ಬೆಳಿಗ್ಗೆ 10.00ಗಂಟೆಗೆ ನಡೆಯಲಿದೆ. ಭಾರತ್ ಸೇವಕ್ ಸಮಾಜದ ವತಿಯಿಂದ ನಡೆಸಲ್ಪಡುವ ನರ್ಸರಿ ಶಾಲಾ ಶಿಕ್ಷಕಿಯರ ತರಬೇತಿ ಪ್ರಮಾಣ ಪತ್ರವು ದೇಶ ವಿದೇಶಗಳಲ್ಲಿ ಉದ್ಯೋಗ ಪಡೆಯಲು ಮಾನ್ಯತೆ ಹೊಂದಿದ್ದು, ಜ್ಞಾನದೀಪ ತರಬೇತಿ ಸಂಸ್ಥೆಯಲ್ಲಿ ಈ ತರಬೇತಿಯನ್ನು ಬಿ.ಎಡ್, ಡಿ.ಎಡ್ ಶಿಕ್ಷಣದ ಮಾದರಿಯಲ್ಲಿ ನೀಡಲಾಗುತ್ತಿದೆ. ಪಿಯುಸಿ ಅಥವಾ ಪದವಿ ಮುಗಿಸಿದ ಬಳಿಕ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಉದ್ಯೋಗ ಪಡೆಯಲು ಈ ತರಬೇತಿಯನ್ನು ಪಡೆಯುವುದು ಅವಶ್ಯಕವಾಗಿದ್ದು ತರಬೇತಿ ಪಡೆಯಲಿಚ್ಚಿಸುವವರು ಉಚಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ತರಬೇತಿಯ ಪೂರ್ಣ ವಿವರಗಳನ್ನು ಪಡೆದುಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

48 minutes ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

3 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

3 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

3 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

6 hours ago