ಜ್ವರ , ಕೆಮ್ಮು, ಉಸಿರಾಟದ ತೊಂದರೆ – ಫೀವರ್ ಕ್ಲಿನಿಕ್ ಸಂಪರ್ಕಿಸಲು ಸೂಚನೆ

April 21, 2020
9:17 PM

ಮಂಗಳೂರು :  ಸಾರ್ವಜನಿಕರು ತಮಗೆ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫೀವರ್ ಕ್ಲಿನಿಕ್ ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement

ಕೋವಿಡ್ ಪರೀಕ್ಷೆಗೊಳಪಡಿಸುವ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೋಗ್ಯ ಸಮಸ್ಯೆಗಳ ಮಾಹಿತಿಯನ್ನು  ಅಧಿಕಾರಿಗಳೊಂದಿಗೆ  ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ.

ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ನೀಡಲು ಈಗಾಗಲೇ ಆದೇಶಿಸಲಾಗಿದೆ. ಅದರಂತೆ ಎಲ್ಲಾ ಖಾಸಗಿ ವೈದ್ಯಾಧಿಕಾರಿಗಳು ಸಹ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.  ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಮಾಹಿತಿಯನ್ನು ನೀಡುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ತಿಳಿಸಲಾಗಿದೆ.
ಈ ರೀತಿ ತ್ವರಿತವಾಗಿ ಮಾಹಿತಿಯನ್ನು ನೀಡುವುದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆತು ಗುಣಪಡಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror