ಜ್ವರ , ಕೆಮ್ಮು, ಉಸಿರಾಟದ ತೊಂದರೆ – ಫೀವರ್ ಕ್ಲಿನಿಕ್ ಸಂಪರ್ಕಿಸಲು ಸೂಚನೆ

April 21, 2020
9:17 PM

ಮಂಗಳೂರು :  ಸಾರ್ವಜನಿಕರು ತಮಗೆ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫೀವರ್ ಕ್ಲಿನಿಕ್ ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಕೋವಿಡ್ ಪರೀಕ್ಷೆಗೊಳಪಡಿಸುವ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೋಗ್ಯ ಸಮಸ್ಯೆಗಳ ಮಾಹಿತಿಯನ್ನು  ಅಧಿಕಾರಿಗಳೊಂದಿಗೆ  ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ.

ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ನೀಡಲು ಈಗಾಗಲೇ ಆದೇಶಿಸಲಾಗಿದೆ. ಅದರಂತೆ ಎಲ್ಲಾ ಖಾಸಗಿ ವೈದ್ಯಾಧಿಕಾರಿಗಳು ಸಹ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.  ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಮಾಹಿತಿಯನ್ನು ನೀಡುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ತಿಳಿಸಲಾಗಿದೆ.
ಈ ರೀತಿ ತ್ವರಿತವಾಗಿ ಮಾಹಿತಿಯನ್ನು ನೀಡುವುದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆತು ಗುಣಪಡಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror