ಗುತ್ತಿಗಾರು: ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ 16ನೇ ವರ್ಷದ ಕಬಡ್ಡಿ ಪಂದ್ಯಾಟ ಮತ್ತು ರಸ್ತೆ ಓಟ ಸ್ಪರ್ಧೆ ಜ.12 ರಂದು ಬೆಳಗ್ಗೆ 9 ಗಂಟೆಗೆ ದ.ಕ.ಜಿ.ಪ.ಸ.ಮಾ.ಹಿ.ಪ್ರಾ.ಶಾಲೆ ಗುತ್ತಿಗಾರಿನಲ್ಲಿ ನಡೆಯಲಿದೆ.
65 ಕೆ.ಜಿ. ಪುರುಷರ ಆಹ್ವಾನಿತ ತಂಡಗಳ ಹಾಗೂ ಸುಳ್ಯ ತಾಲೂಕು ಮಟ್ಟದ 14 ವರ್ಷದ ಬಾಲಕ ಬಾಲಕಿಯರ ಮತ್ತು 17 ವರ್ಷದ ಬಾಲಕ ಬಾಲಕಿಯರ ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.
14 ವರ್ಷ ಹಾಗೂ 17 ವರ್ಷದ ಬಾಲಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 3000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 65 ಕೆ.ಜಿ ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 4000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 5 ವಿಭಾಗಗಳಿಗೆ ವೈಯಕ್ತಿಕ ಬಹುಮಾನಗಳಾದ ಉತ್ತಮ ದಾಳಗಾರ, ಹಿಡಿತಗಾರ ಹಾಗೂ ಸರ್ವಾಂಗೀಣ ಆಟಗಾರರಿಗೆ ನಗದು ಹಾಗೂ ಶಾಶ್ವತ ಫಲಕವಿರುವುದು.
10 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಸ್ತೆ ಓಟದಲ್ಲಿ ಪ್ರಥಮ ಬಹುಮಾನವಾಗಿ 500 ನಗದು ಹಾಗೂ ಚಿನ್ನದ ಪದಕ, ದ್ವಿತೀಯ ಬಹುಮಾನ 300 ನಗದು ಹಾಗೂ ಬೆಳ್ಳಿಯ ಪದಕ, ತೃತೀಯ ಬಹುಮಾನವಾಗಿ ನಗದು 200 ಹಾಗೂ ಕಂಚಿನ ಪದಕ ಮತ್ತು 4ರಿಂದ 10 ಸ್ಥಾನ ಪಡೆದ ಕ್ರೀಡಾಪಟುಗಳಿಗೆ ತಲಾ 100 ಹಾಗೂ ಕಂಚಿನ ಪದಕ ನೀಡಲಾಗುವುದು. ಈ ಬಗ್ಗೆ ಸಂಪರ್ಕಕ್ಕೆ: 9481620381 , 9448689861
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…