Advertisement

ಜ.12 : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನಿಂದ ಕಬಡ್ಡಿ ಪಂದ್ಯಾಟ

Share

ಗುತ್ತಿಗಾರು: ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ವತಿಯಿಂದ 16ನೇ ವರ್ಷದ ಕಬಡ್ಡಿ ಪಂದ್ಯಾಟ ಮತ್ತು ರಸ್ತೆ ಓಟ ಸ್ಪರ್ಧೆ ಜ.12 ರಂದು ಬೆಳಗ್ಗೆ 9 ಗಂಟೆಗೆ ದ.ಕ.ಜಿ.ಪ.ಸ.ಮಾ.ಹಿ.ಪ್ರಾ.ಶಾಲೆ ಗುತ್ತಿಗಾರಿನಲ್ಲಿ ನಡೆಯಲಿದೆ.

65 ಕೆ.ಜಿ. ಪುರುಷರ ಆಹ್ವಾನಿತ ತಂಡಗಳ ಹಾಗೂ ಸುಳ್ಯ ತಾಲೂಕು ಮಟ್ಟದ 14 ವರ್ಷದ ಬಾಲಕ ಬಾಲಕಿಯರ ಮತ್ತು 17 ವರ್ಷದ ಬಾಲಕ ಬಾಲಕಿಯರ ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.

14 ವರ್ಷ ಹಾಗೂ 17 ವರ್ಷದ ಬಾಲಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 3000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 65 ಕೆ.ಜಿ ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 5000 ನಗದು ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ 4000 ನಗದು ಹಾಗೂ ಶಾಶ್ವತ ಫಲಕ, ಸೆಮಿಫೈನಲ್ ನಿರ್ಗಮಿತ 2 ತಂಡಕ್ಕೆ 2000 ನಗದು ಹಾಗೂ ಶಾಶ್ವತ ಫಲಕ ನೀಡಲಾಗುವುದು. 5 ವಿಭಾಗಗಳಿಗೆ ವೈಯಕ್ತಿಕ ಬಹುಮಾನಗಳಾದ ಉತ್ತಮ ದಾಳಗಾರ, ಹಿಡಿತಗಾರ ಹಾಗೂ ಸರ್ವಾಂಗೀಣ ಆಟಗಾರರಿಗೆ ನಗದು ಹಾಗೂ ಶಾಶ್ವತ ಫಲಕವಿರುವುದು.

10 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಸ್ತೆ ಓಟದಲ್ಲಿ ಪ್ರಥಮ ಬಹುಮಾನವಾಗಿ 500 ನಗದು ಹಾಗೂ ಚಿನ್ನದ ಪದಕ, ದ್ವಿತೀಯ ಬಹುಮಾನ 300 ನಗದು ಹಾಗೂ ಬೆಳ್ಳಿಯ ಪದಕ, ತೃತೀಯ ಬಹುಮಾನವಾಗಿ ನಗದು 200 ಹಾಗೂ ಕಂಚಿನ ಪದಕ ಮತ್ತು 4ರಿಂದ 10 ಸ್ಥಾನ ಪಡೆದ ಕ್ರೀಡಾಪಟುಗಳಿಗೆ ತಲಾ 100 ಹಾಗೂ ಕಂಚಿನ ಪದಕ ನೀಡಲಾಗುವುದು. ಈ ಬಗ್ಗೆ ಸಂಪರ್ಕಕ್ಕೆ: 9481620381 , 9448689861

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

4 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

21 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago