ಮಡಿಕೇರಿ: ಕಳೆದ 12 ವರ್ಷಗಳಿಂದ ಮಡಿಕೇರಿಯಲ್ಲಿ ವೈವಿಧ್ಯಮಯ ಚಿನ್ನಾಭರಣಗಳು ಹಾಗೂ ವಿಶ್ವಾಸಾರ್ಹ ವ್ಯವಹಾರದೊಂದಿಗೆ ಕೊಡಗಿನ ಜನತೆಯ ಮನಗೆದ್ದಿರುವ ಮುಳಿಯ ಜ್ಯುವೆಲ್ಸ್ ಈಗ ತನ್ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಜ.18 ರಂದು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದೆ.
ಮಡಿಕೇರಿಯ ಮಹಾದೇವಪೇಟೆಯಲ್ಲಿ 12 ವರ್ಷಗಳ ಹಿಂದೆ, ಮೊತ್ತ ಮೊದಲ ಹವಾನಿಯಂತ್ರಿತ ವ್ಯವಸ್ಥೆ ಹೊಂದಿದ ವಿಶಾಲ ಶೋರೂಮ್ ಎನ್ನುವ ಹೆಗ್ಗಳಿಕೆಯೊಂದಿಗೆ ಆರಂಭವಾದ ಮುಳಿಯ ಜ್ಯುವೆಲ್ಸ್ ನ ಶಾಖೆ ಇದೀಗ ಸಮೀಪದ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದೆ. ಬಹು ಅಂತಸ್ತಿನ ಮೂರು ಸಾವಿರ ಚದರ ಅಡಿಯ ನೂತನ ಶೋರೂಮ್ ಎಲ್ಲಾ ಅತ್ಯಾಧುನಿಕ ಹಾಗೂ ಹವಾನಿಯಂತ್ರಿತ ವ್ಯವಸ್ಥೆಯನ್ನು ಹೊಂದಿದೆ. ಮಾತ್ರವಲ್ಲದೆ ಗ್ರಾಹಕರ ಅನುಕೂಲಕ್ಕಾಗಿ ಕಟ್ಟಡದ ಬೇಸ್ಮೆಂಟ್ ನಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಶೋರೂಮ್ಗೆ ಎರಡು ಕಡೆಯಿಂದ ಪ್ರವೇಶವಿದ್ದು ಗ್ರಾಹಕರು ಮಹದೇವಪೇಟೆ ಮತ್ತು ಗಣಪತಿ ಸ್ಟ್ರೀಟ್ ಕಡೆಯಿಂದ ಪ್ರವೇಶಿಸಬಹುದು.
ಮುಳಿಯ ಜ್ಯುವೆಲ್ಸ್ ಚೇರ್ಮನ್ & ಮ್ಯಾನೆಂಜಿಂಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ ಮಾತನಾಡಿ “ ಪ್ರಥಮ ಬಾರಿಗೆ ಕೊಡಗಿನ ಪಾರಂಪರಿಕ ಆಭರಣಗಳನ್ನು ಶುದ್ಧ 916 ಬಂಗಾರದಲ್ಲಿ ತಯಾರಿಸಿ ಜಾಗತಿಕ ಮನ್ನಣೆಗಳಿಸಿದ ಹೆಗ್ಗಳಿಕೆ ಮುಳಿಯ ಜ್ಯುವೆಲ್ಸ್ ನದ್ದು. ಸಾಮಾಜಿಕ ಕಳಕಳಿಯನ್ನು ಹೊಂದಿರುವ ಮುಳಿಯ ಸಂಸ್ಥೆ, ಕೊಡಗಿನ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸಿ ತನು-ಮನ-ಧನ ಸಹಾಯವನ್ನು ನೀಡಿದೆ ಎಂದರು.ಹಲವಾರು ವರ್ಷಗಳಿಂದ ಕೊಡಗಿನವರೊಂದಿಗೆ ಬೆರೆತು ಕೊಡಗಿನವರೇ ಆಗಿದ್ದೇವೆ. ಕೊಡಗಿನ ಜನತೆ ಕೂಡ ನಮ್ಮನ್ನ ತಮ್ಮವರಂತೆ ಸ್ವೀಕರಿಸಿದ್ದಾರೆ. ಎಂದು ಕೇಶವ ಪ್ರಸಾದ್ ಮುಳಿಯ ಹೇಳಿದರು.
24-48 ಗಂಟೆಯೊಳಗೆ ಗ್ರಾಹಕರ ಬೇಡಿಕೆಗೆ ತಕ್ಕಂತೆ ವಿನ್ಯಾಸ ಹಾಗೂ ತೂಕದ ಆಭರಣಗಳನ್ನು ಷರತ್ತು ಬದ್ದವಾಗಿ ತಯಾರಿಸಿಕೊಡುವುದು ಮುಳಿಯದ ವಿಶೇಷತೆ. ಕೊಡಗಿನ ಸಾಂಪ್ರದಾಯಿಕ ಆಭರಣಗಳಾದ ಕೊಕ್ಕೆತಾತಿ, ಜೋಮಾಲೆ, ಹಾಗೂ ಗಿಳಿಯೋಲೆ, ನೆಕ್ಲೇಸ್, ಉಂಗುರ, ತಾಳಿ, ಕರಿಮಣಿ, ಕಾಲ್ಗೆಜ್ಜೆ, ಬೆಳ್ಳಿ ಮತ್ತು ವಜ್ರದಾಭರಣಗಳು ಮುಳಿಯದಲ್ಲಿ ಗ್ರಾಹಕರಿಗೆ ದೊರೆಯುತ್ತದೆ.
ಮುಳಿಯ ಜ್ಯುವೆಲ್ಲರ್ಸ್ನ ನೂತನ ಶೋರೂಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಚಿತ್ರನಟಿ ಹರ್ಷಿಕಾ ಪೂಣಚ್ಚ ಹಾಗೂ ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ(ಸನ್ನಿಧಿ) ಪಾಲ್ಗೊಳ್ಳಲಿದ್ದಾರೆ. ಚಿತ್ರ ನಟಿಯರೊಂದಿಗೆ ಗ್ರಾಹಕರಿಗೆ ಸೆಲ್ಫಿತೆಗೆಯುವ ಅವಕಾಶವಿರುತ್ತದೆ.
ಸಮಾರಂಭದಲ್ಲಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ಕೊಡಗು ಜೆಡಿಎಸ್ ಅಧ್ಯಕ್ಷ ಕೆ.ಎಂ.ಬಿ ಗಣೇಶ್ , ಮುಳಿಯ ಸಮೂಹ ಸಂಸ್ಥೆ ದಿಗ್ದರ್ಶಕರು ಮುಳಿಯ ಶ್ಯಾಮ ಭಟ್ ಇವರುಗಳು ಪಾಲ್ಗೊಳ್ಳಲಿದ್ದಾರೆ.
ಮುಳಿಯ ಹೊಸ ಶೋರೂಂ ವಿಶೇಷತೆಗಳು
* ವಿಶಾಲ ಹಾಗೂ ಹವಾನಿಯಂತ್ರಿತ ಶೋರೂಂ
* ಪಾರ್ಕಿಂಗ್ ವ್ಯವಸ್ಥೆ
* ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ
* ಚಿನ್ನ ಕೊಳ್ಳುವ ಅಪೂರ್ವ ಅನುಭವ
* ಮುಳಿಯದ ಎಲ್ಲಾ ಆಭರಣಗಳು 916 ಹಾಲ್ಮಾರ್ಕ್ ಶುದ್ಧತೆ
* ಗ್ರಾಹಕ ಸ್ನೇಹಿ, ಪ್ರಾಮಾಣಿಕ ಮತ್ತು ಪಾರದರ್ಶಕ ವಿಶ್ವಾಸಾರ್ಹ ವ್ಯವಹಾರ
* ಅಪ್ರತಿಮ ಆಯ್ಕೆ
* ಬೆಳ್ಳಿಯ ಹಾಗೂ ವಜ್ರದ ಆಭರಣಗಳ ವಿಶೇಷ ಸಂಗ್ರಹ
* ನುರಿತ, ಅನುಭವಿ ಸಿಬ್ಬಂದಿ ವರ್ಗ
* ಮದುವೆ ಆಭರಣಗಳ ಅಪ್ರತಿಮ ಆಯ್ಕೆಯ ಅವಕಾಶ
* ಕೊಡಗು ಪಾರಂಪರಿಕ ಆಭರಣಗಳ ಅಪೂರ್ವ ಸಂಗ್ರಹ
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…