Advertisement
ಕಾರ್ಯಕ್ರಮಗಳು

ಜ. 18: ಸವಣೂರು ಗ್ರಾಮ ಪಂಚಾಯತ್‌ನ ನೂತನ ಸಭಾಂಗಣ ಕುಮಾರಧಾರ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

Share

ಸವಣೂರು: ಸವಣೂರು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಕಚೇರಿ ಕಟ್ಟಡ ‘ಅಟಲ್ ಸೌಧ’ದಲ್ಲಿ ನಿರ್ಮಾಣಗೊಂಡ ನೂತನ ಸಭಾಂಗಣ ‘ಕುಮಾರಧಾರ’ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮರಂಭವು ಜ. 18 ರಂದು ನಡೆಯಲಿದ್ದು, ಸಭಾ ಕಾರ್‍ಯಕ್ರಮವು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿರವರು ದೀಪ ಪ್ರಜ್ವಲನೆಯನ್ನು ಮಾಡಲಿದ್ದಾರೆ. ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆರವರು ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್‌ರವರು ಸಭಾಂಗಣದ ಉದ್ಘಾಟನೆ ಮಾಡಲಿದ್ದಾರೆ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡುರವರು ಪಾಲ್ತಾಡಿ ಗ್ರಾಮದ ಮಂಜುನಾಥನಗರದಲ್ಲಿ ಸೋಲಾರ್ ದೀಪ ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿರವರು ಸವಣೂರು ಸಿ.ಎ.ಬ್ಯಾಂಕ್ ಮುಂಭಾಗದಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನೆ ಮಾಡಲಿದ್ದಾರೆ. ಸುಳ್ಯ ಶಾಸಕ ಎಸ್. ಅಂಗಾರರವರು ಕುಮಾರಮಂಗಲದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆ ಮತ್ತು ಪಂಚಪದ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರುರವರು ಅಂಕತಡ್ಕ ಅಂಗನವಾಡಿ ಕೇಂದ್ರದ ಉದ್ಘಾಟನೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯರುಗಳಾದ ಭೋಜೇ ಗೌಡ, ಐವನ್ ಡಿಸೋಜ, ಆಯನೂರು ಮಂಜುನಾಥ್, ಕೆ.ಹರೀಶ್ ಕುಮಾರ್, ಬಿ.ಎಂ.ಫಾರೂಕ್‌ರವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ತಾ.ಪಂ, ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ರವರು ಸವಣೂರು ಮುಖ್ಯ ಪೇಟೆಯಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣವನ್ನು ಉದ್ಘಾಟಿಸಲಿದ್ದಾರೆ. ಜಿ.ಪಂ, ಸದಸ್ಯೆ ಪ್ರಮೀಳಾ ಜನಾರ್ಧನ್‌ರವರು ಮಾಂತೂರು ಬಳಿ ನಿರ್ಮಾಣಗೊಂಡ ನೀರಿನ ಟ್ಯಾಂಕ್ ಉದ್ಘಾಟಿಸಲಿದ್ದಾರೆ. ತಾ.ಪಂ,ಉಪಾಧ್ಯಕ್ಷೆ ಲಲಿತಾ ಈಶ್ವರ್, ಸದಸ್ಯೆ ರಾಜೇಶ್ವರಿ, ಗ್ರಾ.ಪಂ,ಉಪಾಧ್ಯಕ್ಷ ರವಿಕುಮಾರ್, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಸಿ.ಎ,ಬ್ಯಾಂಕ್ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ತಾ.ಪಂ,ಕಾರ್ರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಪುತ್ತೂರು ಉಪವಿಭಾಗದ ಸಹಾಯಕ ಕಾರ್ರ್ಯನಿರ್ವಾಹಕ ಅಭಿಯಂತರು ಪಂಚಾಯತ್‌ರಾಜ್ ಇಂಜಿನಿಯರ್ ಸತ್ಯೇಂದ್ರ ಸಾಲಿಯಾನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸರಸ್ವತಿ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಈ ಸಂದರ್ಭದಲ್ಲಿ ಗ್ರಾ.ಪಂ, ವ್ಯಾಪ್ತಿಯ ಶಾಲಾ ಆವರಣ ಗೋಡೆ, ಗ್ರಾ.ಪಂ, ವ್ಯಾಪ್ತಿಯ ಸೋಲಾರ್ ದೀಪಗಳು, ಗ್ರಾ.ಪಂ, ವ್ಯಾಪ್ತಿಯ ಸಿ.ಸಿ ರಸ್ತೆಗಳು ಹಾಗೂ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದಲ್ಲಿ ನಿವೇಶನ ಹಂಚಿಕೆಯು ನಡೆಯಲಿದೆ ಎಂದು ಸವಣೂರು ಗ್ರಾ.ಪಂ, ಅಧ್ಯಕ್ಷೆ ಇಂದಿರಾ ಬಿ.ಕೆ, ಉಪಾಧ್ಯಕ್ಷ ಬಿ.ಕೆ, ರವಿಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಬಿ ಹಾಗೂ ಲೆಕ್ಕ ಸಹಾಯಕ ಮನ್ಮಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

12 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

12 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

13 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

13 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

3 days ago