ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ಜ.19 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ಸಂಜೆ ನಾಲ್ಕಕ್ಕೆ ನಡೆಯುವ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸುವರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಗುತ್ತಿಗಾರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ ಪ್ರಸಾದ್ ಎಂ.ಆರ್ ಭಾಗವಹಿಸಲಿದ್ದಾರೆ.
ಉದ್ಘಾಟನೆಯ ಬಳಿಕ ಸಂಜೆ 5.30 ರಿಂದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಹಾಡುಗಾರಿಕೆ ನಡೆಯಲಿದೆ. ವಯಲಿನ್ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಲಿದ್ದಾರೆ ಎಂದು ರಂಜನಿ ಸಂಗೀತ ಸಭಾದ ನಿರ್ದೇಶಕ ಸತ್ಯನಾರಾಯಣ ಹೊನ್ನಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…