ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ಜ.19 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ಸಂಜೆ ನಾಲ್ಕಕ್ಕೆ ನಡೆಯುವ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸುವರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಗುತ್ತಿಗಾರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ ಪ್ರಸಾದ್ ಎಂ.ಆರ್ ಭಾಗವಹಿಸಲಿದ್ದಾರೆ.
ಉದ್ಘಾಟನೆಯ ಬಳಿಕ ಸಂಜೆ 5.30 ರಿಂದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಹಾಡುಗಾರಿಕೆ ನಡೆಯಲಿದೆ. ವಯಲಿನ್ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಲಿದ್ದಾರೆ ಎಂದು ರಂಜನಿ ಸಂಗೀತ ಸಭಾದ ನಿರ್ದೇಶಕ ಸತ್ಯನಾರಾಯಣ ಹೊನ್ನಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…