ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಸಂಗೀತ ಸಂಭ್ರಮ ಜ.19 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಪದ್ಮಶ್ರೀ ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ಸಂಜೆ ನಾಲ್ಕಕ್ಕೆ ನಡೆಯುವ ಸಮಾರಂಭವನ್ನು ಸುಳ್ಯದ ಆಯಶಿಲ್ಪಾದ ನಿರ್ದೇಶಕ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸುವರು. ವೈದಿಕ ವಿದ್ವಾಂಸ ಕರುವಜೆ ಕೇಶವ ಜೋಯಿಸ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಚೊಕ್ಕಾಡಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಗುತ್ತಿಗಾರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ ಪ್ರಸಾದ್ ಎಂ.ಆರ್ ಭಾಗವಹಿಸಲಿದ್ದಾರೆ.
ಉದ್ಘಾಟನೆಯ ಬಳಿಕ ಸಂಜೆ 5.30 ರಿಂದ ವಿದ್ವಾನ್ ಶೆಂಗೊಟ್ಟೈ ಹರಿಹರ ಸುಬ್ರಹ್ಮಣ್ಯ ಅವರ ಹಾಡುಗಾರಿಕೆ ನಡೆಯಲಿದೆ. ವಯಲಿನ್ನಲ್ಲಿ ತಿರುವಿಲ್ಲಾ ವಿಜು ಎಸ್.ಆನಂದ್, ಮೃದಂಗದಲ್ಲಿ ಪಾಲಕ್ಕಾಡ್ ಮಹೇಶ್ಕುಮಾರ್, ಘಟಂನಲ್ಲಿ ವಾಝಪಳ್ಳಿ ಆರ್.ಕೃಷ್ಣಕುಮಾರ್ ಸಹಕರಿಸಲಿದ್ದಾರೆ ಎಂದು ರಂಜನಿ ಸಂಗೀತ ಸಭಾದ ನಿರ್ದೇಶಕ ಸತ್ಯನಾರಾಯಣ ಹೊನ್ನಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…