Advertisement
ಸುದ್ದಿಗಳು

ಜ. 20 ಮತ್ತು 21 ವಿವೇಕಾನಂದ ಕಾಲೇಜಿನಲ್ಲಿ ಅಂತರ್ ಕಾಲೇಜು ಹುಡುಗರ ಕಬಡ್ಡಿ ಪಂದ್ಯಾಟ

Share

ಪುತ್ತೂರು: ನೆಹರು ನಗರದ ವಿವೇಕಾನಂದ ಕಾಲೇಜಿನಲ್ಲಿ ಜ. 20 ಮತ್ತು 21 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ. ಮಂಗಳೂರು ವಲಯದ ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕು ಮತ್ತು ಕೊಡಗು ಜಿಲ್ಲೆಯಿಂದ ಸುಮಾರು 47 ಕಾಲೇಜುಗಳು ಭಾಗವಹಿಸುತ್ತಿವೆ. ಪ್ರಥಮ ಬಾರಿಗೆ ಮ್ಯಾಟ್ ಅಂಗಳದ ಕಬಡ್ಡಿ ಪಂದ್ಯಾಟ ನಡೆಯುತ್ತಿದ್ದು, ವಿವೇಕಾನಂದ ಕಾಲೇಜು 40 ವರ್ಷಗಳ ಬಳಿಕ ಈ ಪಂದ್ಯಾಟದ ಆತಿಥ್ಯವನ್ನು ವಹಿಸಿದೆ.

Advertisement
Advertisement

ಜ.20 ರಂದು ಬೆಳಗ್ಗೆ 9.45ಕ್ಕೆ ಉದ್ಘಾಟನ ಕಾರ್ಯಕ್ರಮ ನಡೆಯಲಿದ್ದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ವಿಜಯ ಬ್ಯಾಂಕ್‍ನ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ನಿರ್ದೇಶಕ ಗುಣಪಾಲ ಜೈನ್, ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ., ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್., ಆಡಳಿತ ಮಂಡಳಿಯ ಸದಸ್ಯರಾದ ರಮಾನಾಥ ಶೆಣೈ, ಕೃಷ್ಣ ನಾಯ್ಕ್ ಎ., ಉಷಾ ನಾಯಕ್ ಅಭ್ಯಾಗತರಾಗಿ ಉಪಸ್ಥಿತರಿರಲಿದ್ದಾರೆ.

ಜ.21 ರಂದು ಸಂಜೆ 3ಕ್ಕೆ ಸಮಾರೋಪ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಆರೋಗ್ಯ ವಿಭಾಗ, ರಾಷ್ಟ್ರೀಯ ಕಬಡ್ಡಿ ಆಟಗಾರ, ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ರವಿ ಸುವರ್ಣ, ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದ ದೈಹಿಕ ಶಿಕ್ಷಣ ನಿರ್ದೇಶಕ, ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಕಾಶ್ ಮಾಣಿ, ಭದ್ರಾವತಿಯ ಕ್ಯಾಂಪ್ಕೊ ಮ್ಯಾನೇಜರ್ ಹಾಗೂ ರಾಷ್ಟ್ರೀಯ ಕಬಡ್ಡಿ ಆಟಗಾರ ಬಿಪಿನ್ ಕುಮಾರ್ ಶೆಟ್ಟಿ ಮಾಣಿ ಹಾಗೂ ಬೆಂಗಳೂರಿನ ಆಡಿ ಕಂಪೆನಿಯ ಹೆಚ್.ಆರ್. ಮ್ಯಾನೇಜರ್, ರಾಷ್ಟ್ರೀಯ ಕಬಡ್ಡಿ ಆಟಗಾರ ವಿಕಾಸ್ ಮಾಣಿ ಆಗಮಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಆಡಳಿತ ಮಂಡಳಿಯ ಕೋಶಾಧಿಕಾರಿ ಜನಾರ್ದನ ಭಟ್ ಎಸ್., ಸದಸ್ಯರಾದ ಎಂ. ಅನಂತಕೃಷ್ಣ ನಾಯಕ್, ಶೋಭಾ ಕೊಳತ್ತಾಯ ಎನ್., ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಐಕ್ಯುಎಸಿ ಘಟಕದ ಸಂಯೋಜಕ ಡಾ. ಶ್ರೀಧರ ಎಚ್.ಜಿ. ಮತ್ತಿತರರು ಉಪಸ್ಥಿತರಿರಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago