Advertisement
ಸುದ್ದಿಗಳು

ಜ. 20 ಮತ್ತು 21 ವಿವೇಕಾನಂದ ಕಾಲೇಜಿನಲ್ಲಿ ಅಂತರ್ ಕಾಲೇಜು ಹುಡುಗರ ಕಬಡ್ಡಿ ಪಂದ್ಯಾಟ

Share

ಪುತ್ತೂರು: ನೆಹರು ನಗರದ ವಿವೇಕಾನಂದ ಕಾಲೇಜಿನಲ್ಲಿ ಜ. 20 ಮತ್ತು 21 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ. ಮಂಗಳೂರು ವಲಯದ ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕು ಮತ್ತು ಕೊಡಗು ಜಿಲ್ಲೆಯಿಂದ ಸುಮಾರು 47 ಕಾಲೇಜುಗಳು ಭಾಗವಹಿಸುತ್ತಿವೆ. ಪ್ರಥಮ ಬಾರಿಗೆ ಮ್ಯಾಟ್ ಅಂಗಳದ ಕಬಡ್ಡಿ ಪಂದ್ಯಾಟ ನಡೆಯುತ್ತಿದ್ದು, ವಿವೇಕಾನಂದ ಕಾಲೇಜು 40 ವರ್ಷಗಳ ಬಳಿಕ ಈ ಪಂದ್ಯಾಟದ ಆತಿಥ್ಯವನ್ನು ವಹಿಸಿದೆ.

ಜ.20 ರಂದು ಬೆಳಗ್ಗೆ 9.45ಕ್ಕೆ ಉದ್ಘಾಟನ ಕಾರ್ಯಕ್ರಮ ನಡೆಯಲಿದ್ದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ವಿಜಯ ಬ್ಯಾಂಕ್‍ನ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ನಿರ್ದೇಶಕ ಗುಣಪಾಲ ಜೈನ್, ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ., ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್., ಆಡಳಿತ ಮಂಡಳಿಯ ಸದಸ್ಯರಾದ ರಮಾನಾಥ ಶೆಣೈ, ಕೃಷ್ಣ ನಾಯ್ಕ್ ಎ., ಉಷಾ ನಾಯಕ್ ಅಭ್ಯಾಗತರಾಗಿ ಉಪಸ್ಥಿತರಿರಲಿದ್ದಾರೆ.

ಜ.21 ರಂದು ಸಂಜೆ 3ಕ್ಕೆ ಸಮಾರೋಪ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಆರೋಗ್ಯ ವಿಭಾಗ, ರಾಷ್ಟ್ರೀಯ ಕಬಡ್ಡಿ ಆಟಗಾರ, ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ರವಿ ಸುವರ್ಣ, ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದ ದೈಹಿಕ ಶಿಕ್ಷಣ ನಿರ್ದೇಶಕ, ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಕಾಶ್ ಮಾಣಿ, ಭದ್ರಾವತಿಯ ಕ್ಯಾಂಪ್ಕೊ ಮ್ಯಾನೇಜರ್ ಹಾಗೂ ರಾಷ್ಟ್ರೀಯ ಕಬಡ್ಡಿ ಆಟಗಾರ ಬಿಪಿನ್ ಕುಮಾರ್ ಶೆಟ್ಟಿ ಮಾಣಿ ಹಾಗೂ ಬೆಂಗಳೂರಿನ ಆಡಿ ಕಂಪೆನಿಯ ಹೆಚ್.ಆರ್. ಮ್ಯಾನೇಜರ್, ರಾಷ್ಟ್ರೀಯ ಕಬಡ್ಡಿ ಆಟಗಾರ ವಿಕಾಸ್ ಮಾಣಿ ಆಗಮಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಆಡಳಿತ ಮಂಡಳಿಯ ಕೋಶಾಧಿಕಾರಿ ಜನಾರ್ದನ ಭಟ್ ಎಸ್., ಸದಸ್ಯರಾದ ಎಂ. ಅನಂತಕೃಷ್ಣ ನಾಯಕ್, ಶೋಭಾ ಕೊಳತ್ತಾಯ ಎನ್., ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಐಕ್ಯುಎಸಿ ಘಟಕದ ಸಂಯೋಜಕ ಡಾ. ಶ್ರೀಧರ ಎಚ್.ಜಿ. ಮತ್ತಿತರರು ಉಪಸ್ಥಿತರಿರಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

3 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

3 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

10 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

15 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago