ಜ.4 : ಮುಕ್ಕೂರಿನಲ್ಲಿ ಚಲನಚಿತ್ರೋತ್ಸವ

January 1, 2020
11:18 AM

ಸುಳ್ಯ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನ ಚಿತ್ರಗಳ ಪ್ರದರ್ಶನ ‘ಚಲನಚಿತ್ರೋತ್ಸವ’ ಕಾರ್ಯಕ್ರಮ ಜ.4 ರಂದು ಮುಕ್ಕೂರು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿದೆ.

ಚಲನಚಿತ್ರೋತ್ಸವದಲ್ಲಿ ಪಿ.ಶೇಷಾದ್ರಿ ನಿರ್ದೇಶನದ ಬೆಟ್ಟದ ಜೀವ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಸರಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರ ಪ್ರದರ್ಶನಗೊಳ್ಳಲಿದೆ.
ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಧಿಕಾರಿ ಎಸ್.ಪಿ.ಮಹಾದೇವ ಭಾಗವಹಿಸಲಿದ್ದಾರೆ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ, ನೇಸರ ಯುವಕ ಮಂಡಲ ಗೌರವ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಪದ್ಮಾವತಿ ದೇವಿಮೂಲೆ, ಪ್ರಭಾರ ಮುಖ್ಯಗುರು ವಸಂತಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror