ಸುಳ್ಯ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನ ಚಿತ್ರಗಳ ಪ್ರದರ್ಶನ ‘ಚಲನಚಿತ್ರೋತ್ಸವ’ ಕಾರ್ಯಕ್ರಮ ಜ.4 ರಂದು ಮುಕ್ಕೂರು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿದೆ.
ಚಲನಚಿತ್ರೋತ್ಸವದಲ್ಲಿ ಪಿ.ಶೇಷಾದ್ರಿ ನಿರ್ದೇಶನದ ಬೆಟ್ಟದ ಜೀವ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಸರಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರ ಪ್ರದರ್ಶನಗೊಳ್ಳಲಿದೆ.
ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಧಿಕಾರಿ ಎಸ್.ಪಿ.ಮಹಾದೇವ ಭಾಗವಹಿಸಲಿದ್ದಾರೆ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ, ನೇಸರ ಯುವಕ ಮಂಡಲ ಗೌರವ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷೆ ಪದ್ಮಾವತಿ ದೇವಿಮೂಲೆ, ಪ್ರಭಾರ ಮುಖ್ಯಗುರು ವಸಂತಿ ಭಾಗವಹಿಸಲಿದ್ದಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…