ಸುಳ್ಯ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನ ಚಿತ್ರಗಳ ಪ್ರದರ್ಶನ ‘ಚಲನಚಿತ್ರೋತ್ಸವ’ ಕಾರ್ಯಕ್ರಮ ಜ.4 ರಂದು ಮುಕ್ಕೂರು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿದೆ.
ಚಲನಚಿತ್ರೋತ್ಸವದಲ್ಲಿ ಪಿ.ಶೇಷಾದ್ರಿ ನಿರ್ದೇಶನದ ಬೆಟ್ಟದ ಜೀವ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಸರಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರ ಪ್ರದರ್ಶನಗೊಳ್ಳಲಿದೆ.
ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಧಿಕಾರಿ ಎಸ್.ಪಿ.ಮಹಾದೇವ ಭಾಗವಹಿಸಲಿದ್ದಾರೆ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ, ನೇಸರ ಯುವಕ ಮಂಡಲ ಗೌರವ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷೆ ಪದ್ಮಾವತಿ ದೇವಿಮೂಲೆ, ಪ್ರಭಾರ ಮುಖ್ಯಗುರು ವಸಂತಿ ಭಾಗವಹಿಸಲಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…