ಪುತ್ತೂರು: ನವಚೇತನ ಸ್ನೇಹಸಂಗಮ ಹಾಗೂ ಜೇಸೀಐ ಪುತ್ತೂರು ಇದರ ಆಶ್ರಯದಲ್ಲಿ ಜ.4 ಹಾಗೂ 5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾವಯವ ಹಬ್ಬ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾವಯವ ಹಬ್ಬದಲ್ಲಿ ಸಿರಿಧಾನ್ಯ, ದಿನಸಿ ಹಾಗೂ ತರಕಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು ವಿಷಮುಕ್ತ ಅನ್ನದ ಬಟ್ಟಲು ಈ ಹಬ್ಬದ ಧ್ಯೇಯವಾಗಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರಿಂದ ನೇರವಾಗಿ ಗ್ರಾಹಕರಿಗೆ ಈ ಹಬ್ಬದ ಮೂಲಕ ತಲಪಿಸುವ ಮೂಲಕ ಸಾವಯವ ಜಾಗೃತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ.ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳು, ಸಾವಯವ ಕೃಷಿ ಮಾತುಕತೆ ನಡೆಯಲಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…