ಮಂಗಳೂರು: ಇತಿಹಾಸದಲ್ಲಿ ಅತ್ಯಂತಕ್ರೂರಿ, ಮತಾಂಧ, ಅಸಹಿಷ್ಣು, ಕನ್ನಡ ವಿರೋಧಿಯಾಗಿ ಕಾಣಿಸಿಕೊಂಡಿರುವ ಟಿಪ್ಪು ಸುಲ್ತಾನನನ್ನು ಅನಗತ್ಯವಾಗಿ ವೈಭವೀಕರಿಸಿ ಇತಿಹಾಸವನ್ನು ತಿರುಚಿ ಜನರಿಗೆ ತಿಳಿಸುವ ಮತ್ತು ಈ ಮೂಲಕ ಮಕ್ಕಳಿಗೆ ನಕಲಿ ಇತಿಹಾಸವನ್ನು ಕಲಿಸುವ ಪ್ರಯತ್ನ ನಡೆದಿತ್ತು. ಈಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂತಹ ಸುಳ್ಳು ಮತ್ತು ತಿರುಚಿದ ಟಿಪ್ಪುವಿನ ಇತಿಹಾಸವನ್ನು ಶಾಲಾಪಠ್ಯಕ್ರಮದಿಂದ ತೆಗೆದು ಹಾಕುವ ನಿರ್ಣಯ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ. ಇದರ ಜೊತೆಗೆ ಮೈಸೂರು ಬೆಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸಪ್ರೆಸ್ ರೈಲಿನ ಹೆಸರನ್ನುಬದಲಾಯಿಸಿ, ಕೃಷ್ಣರಾಜ ಒಡೆಯರ್ ಹೆಸರನ್ನುಇಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…