Advertisement
ಸುದ್ದಿಗಳು

ಟಿ-20: ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಸರಣಿ ಗೆಲುವು

Share

ಮುಂಬೈ:ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ 67 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿಗೆ 241 ಗುರಿ ಪಡೆದಿದ್ದ ವೆಸ್ಟ್‌ ಇಂಡೀಸ್‌ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಈ ಮೂಲಕ ಭಾರತ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿತು.

Advertisement
Advertisement

ವಿಂಡೀಸ್ ಪರ ಹೆಟ್ಮಿರ್ 5 ಭರ್ಜರಿ ಸಿಕ್ಸರ್ ಸಿಡಿಸಿ 41 ರನ್ ಹಾಗೂ ಕೀರೊನ್ ಪೊಲಾರ್ಡ್ 5 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಮೂಲಕ 68 ರನ್ ಗಳಿಸಿದರು. ಭಾರತ ಪರ ಮುಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್ ಹಾಗೂ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವಿಂಡೀಸ್ ಗೆ ಕಠಿಣ ಸವಾಲು ವಿಧಿಸಿತ್ತು. 20 ಓವರ್ ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿ ವಿಂಡೀಸ್ ಗೆ 241 ರನ್ ಗಳ ಗುರಿ ನೀಡಿತ್ತು. ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ ಹಾಗೂ ಕೆ.ಎಲ್‌ ರಾಹುಲ್‌ ಮೊದಲ ವಿಕೆಟ್‌ಗೆ 135 ರನ್‌ ಗಳಿಸಿದರು. ರೋಹಿತ್‌ ಶರ್ಮಾ 71 ರನ್ ಗಳಿಸಿ ಔಟಾದರು. ಬಳಿಕ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ರಿಷಭ್‌ ಪಂತ್‌ ಖಾತೆ ತೆರೆಯದೆ ನಿರ್ಗಮಿಸಿದರು. ನಂತರ ವಿರಾಟ್‌ ಕೊಹ್ಲಿ ಕೇವಲ 29 ಎಸೆತಗಳಲ್ಲಿ ಏಳು ಸಿಕ್ಸರ್‌ ಹಾಗೂ 4 ಬೌಂಡರಿ ಮೂಲಕ 70 ರನ್‌ ಗಳಿಸಿದರು. ಕನ್ನಡಿಗ ರಾಹುಲ್‌ 56 ಎಸೆತಗಳಲ್ಲಿ 91 ರನ್‌ ಗಳಿಸಿ ಔಟಾದರು.

ವೆಸ್ಟ್‌ ಇಂಡೀಸ್‌ ಪರ ಶೇಲ್ಡನ್‌ ಕಾಟ್ರೆಲ್‌ 40ಕ್ಕೆ 1, ಕೆಸ್ರಿಕ್ ವಿಲಿಯಮ್ಸ್ 37ಕ್ಕೆ 1, ಕೀರನ್ ಪೊಲಾರ್ಡ್ 33ಕ್ಕೆ 1 ವಿಕೆಟ್‌ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

4 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

4 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago