Advertisement
ಸುದ್ದಿಗಳು

ಟಿ-20: ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಸರಣಿ ಗೆಲುವು

Share

ಮುಂಬೈ:ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ 67 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿಗೆ 241 ಗುರಿ ಪಡೆದಿದ್ದ ವೆಸ್ಟ್‌ ಇಂಡೀಸ್‌ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಈ ಮೂಲಕ ಭಾರತ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿತು.

ವಿಂಡೀಸ್ ಪರ ಹೆಟ್ಮಿರ್ 5 ಭರ್ಜರಿ ಸಿಕ್ಸರ್ ಸಿಡಿಸಿ 41 ರನ್ ಹಾಗೂ ಕೀರೊನ್ ಪೊಲಾರ್ಡ್ 5 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಮೂಲಕ 68 ರನ್ ಗಳಿಸಿದರು. ಭಾರತ ಪರ ಮುಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್ ಹಾಗೂ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವಿಂಡೀಸ್ ಗೆ ಕಠಿಣ ಸವಾಲು ವಿಧಿಸಿತ್ತು. 20 ಓವರ್ ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿ ವಿಂಡೀಸ್ ಗೆ 241 ರನ್ ಗಳ ಗುರಿ ನೀಡಿತ್ತು. ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ ಹಾಗೂ ಕೆ.ಎಲ್‌ ರಾಹುಲ್‌ ಮೊದಲ ವಿಕೆಟ್‌ಗೆ 135 ರನ್‌ ಗಳಿಸಿದರು. ರೋಹಿತ್‌ ಶರ್ಮಾ 71 ರನ್ ಗಳಿಸಿ ಔಟಾದರು. ಬಳಿಕ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ರಿಷಭ್‌ ಪಂತ್‌ ಖಾತೆ ತೆರೆಯದೆ ನಿರ್ಗಮಿಸಿದರು. ನಂತರ ವಿರಾಟ್‌ ಕೊಹ್ಲಿ ಕೇವಲ 29 ಎಸೆತಗಳಲ್ಲಿ ಏಳು ಸಿಕ್ಸರ್‌ ಹಾಗೂ 4 ಬೌಂಡರಿ ಮೂಲಕ 70 ರನ್‌ ಗಳಿಸಿದರು. ಕನ್ನಡಿಗ ರಾಹುಲ್‌ 56 ಎಸೆತಗಳಲ್ಲಿ 91 ರನ್‌ ಗಳಿಸಿ ಔಟಾದರು.

ವೆಸ್ಟ್‌ ಇಂಡೀಸ್‌ ಪರ ಶೇಲ್ಡನ್‌ ಕಾಟ್ರೆಲ್‌ 40ಕ್ಕೆ 1, ಕೆಸ್ರಿಕ್ ವಿಲಿಯಮ್ಸ್ 37ಕ್ಕೆ 1, ಕೀರನ್ ಪೊಲಾರ್ಡ್ 33ಕ್ಕೆ 1 ವಿಕೆಟ್‌ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

10 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

10 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

14 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago