ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್ನ್ನು 497 ರನ್ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.
ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.
ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…