ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್ನ್ನು 497 ರನ್ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.
ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.
ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…