ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್ನ್ನು 497 ರನ್ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.
ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.
ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…